20 ವರ್ಷಗಳ ನಂತರ ಜೊತೆಯಾದ ಠಾಕ್ರೆ ಸೋದರ ಸಂಬಂಧಿಗಳು

Date:

Advertisements

ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಠಾಕ್ರೆ ಸೋದರ ಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ 20 ವರ್ಷಗಳ ನಂತರ ಸಾರ್ವಜನಿಕ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ‘ಮರಾಠಿ-ಭಾಷಾ’ ಮತ್ತು ‘ಮರಾಠಿ-ಮಾನೂಸ್’ (ಮರಾಠಿ ಜನ) ಹೆಸರಿನಲ್ಲಿ ನಡೆಯುತ್ತಿರುವ ಅಭಿಯಾನದಲ್ಲಿ ಇಬ್ಬರೂ ಒಗ್ಗೂಡಿದ್ದಾರೆ. ಅವರು ಜೊತೆಗೂಡಿರುವುದು, ಮಹಾರಾಷ್ಟ್ರದಲ್ಲಿ ಶೀಘ್ರವೇ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳನ್ನು ಸೂಚಿಸಿದೆ.

ಮಹಾರಾಷ್ಟ್ರ ಸರ್ಕಾರವು ಪ್ರಾಥಮಿಕ ಶಾಲೆಗಳಲ್ಲಿ ತ್ರಿಭಾಷಾ ನೀತಿಯನ್ನು ಹಿಂತೆಗೆದುಕೊಂಡಿದ್ದನ್ನು ಸ್ವಾಗತಿಸಿ ಮತ್ತು ಭಾಷಾ ಹೋರಾಟಗಾರರನ್ನು ಗೂಂಡಾಗಳು ಎಂದಿದ್ದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರ ಹೇಳಿಕೆ ಖಂಡಿಸಿ ಶನಿವಾರ, ಮುಂಬೈನ ವರ್ಲಿಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಮತ್ತು ಎಂಎನ್‌ಎಸ್ ಅಧ್ಯಕ್ಷ ರಾಜ್ ಹಾಗೂ ಆದಿತ್ಯ (ಉದ್ಧವ್ ಮಗ) ಮತ್ತು ಅಮಿತ್ (ರಾಜ್ ಮಗ) ಪರಸ್ಪರ ಜೊತೆಯಾಗಿ ವೇದಿಕೆಗೆ ಬಂದರು. ಅವರು ಜೊತೆಯಾಗಿ ವೇದಿಕೆ ಏರಿದ್ದು ರಾಜಕೀಯ ವಲಯಕ್ಕೆ ಬಲವಾದ ಸಂದೇಶವನ್ನು ರವಾನಿಸಿದೆ.

ಕಾರ್ಯಕ್ರಮದಲ್ಲಿ ಉದ್ಧವ್ ಮತ್ತು ರಾಜ್‌ ಭಾಷಣ ಮಾಡಿದ ನಂತರ, ಕಾರ್ಯಕ್ರಮದಲ್ಲಿ ನೆರೆದಿದ್ದವರು, “ಠಾಕ್ರೆ ಬ್ರ್ಯಾಂಡ್ ಜೊತೆಗೂಡಿದೆ” ಎಂದು ಹರ್ಷೋದ್ಗಾರ ಮಾಡಿದರು.

Advertisements

“ಒಂದು ವಿಷಯ ಸ್ಪಷ್ಟವಾಗಿದೆ. ನಾವು ನಮ್ಮ ನಡುವಿನ ಅಂತರವನ್ನು ತೊಡೆದುಹಾಕಿದ್ದೇವೆ… ನಾವು ಒಟ್ಟಿಗೆ ಇರುತ್ತೇವೆ. ಅದಕ್ಕಾಗಿ, ಒಟ್ಟಿಗೆ ಬಂದಿದ್ದೇವೆ” ಎಂದು ಉದ್ಧವ್ ಘೋಷಿಸಿದ್ದಾರೆ.

“ಇಂದು, 20 ವರ್ಷಗಳ ನಂತರ, ಉದ್ಧವ್ ಮತ್ತು ನಾನು ಒಟ್ಟಿಗೆ ಬಂದಿದ್ದೇವೆ. ಬಾಳಾಸಾಹೇಬ್ ಅವರು ಸಾಧಿಸಲು ಸಾಧ್ಯವಾಗದ್ದನ್ನು, ದೇವೇಂದ್ರ ಫಡ್ನವೀಸ್ ಮಾಡಿದರು. ಅದು ನಮ್ಮಿಬ್ಬರನ್ನೂ ಒಟ್ಟಿಗೆ ತರುವ ಕೆಲಸ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಯನ್ನು ರಾಜ್ ಛೇಡಿಸಿದರು.

“ವಿಧಾನಸೌಧದಲ್ಲಿ ನಿಮಗೆ (ಬಿಜೆಪಿ-ಫಡ್ನವೀಸ್) ಅಧಿಕಾರವಿರಬಹುದು, ರಸ್ತೆಗಳಲ್ಲಿ ನಮಗೆ ಅಧಿಕಾರವಿದೆ” ಎಂದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

“ಉದ್ಧವ್ ಮತ್ತು ರಾಜ್ – ಇಬ್ಬರೂ ಒಗ್ಗೂಡಿ ಮುಂಬೈ ನಾಗರಿಕ ಸಂಸ್ಥೆಯಲ್ಲಿ ಮಾತ್ರವಲ್ಲದೆ ಮಹಾರಾಷ್ಟ್ರದಲ್ಲಿಯೂ ಅಧಿಕಾರವನ್ನು ಪಡೆಯುತ್ತೇವೆ” ಎಂದು ಹೇಳಿದರು.

ಮರಾಠಿ ಭಾಷೆಯ ಬಗ್ಗೆ ಯಾವುದೇ ರಾಜಿ ಇರುವುದಿಲ್ಲ ಎಂದ ಉದ್ಧವ್ ಮತ್ತು ರಾಜ್, ಹೊಸ ಶಿಕ್ಷಣ ನೀತಿಯಡಿಯಲ್ಲಿ ತ್ರಿಭಾಷಾ ನೀತಿಯನ್ನು ಖಂಡಿಸಿದರು.

“ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಜನರಿಗೆ ಮೂರನೇ ಭಾಷೆ ಯಾವುದು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ. ಇಂದು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಎಲ್ಲವೂ ಇಂಗ್ಲಿಷ್‌ನಲ್ಲಿದೆ. ಹಿಂದಿ ಬೇರೆ ಯಾವುದೇ ರಾಜ್ಯದಲ್ಲಿಲ್ಲ. ಮಹಾರಾಷ್ಟ್ರದಲ್ಲಿ ಮಾತ್ರ ಏಕೆ? ಮಹಾರಾಷ್ಟ್ರ ಎಚ್ಚರವಾದಾಗ, ಏನಾಗುತ್ತದೆ ಎಂಬುದನ್ನು ನೀವು ನೋಡಬೇಕಾಗುತ್ತದೆ” ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X