ಕೋಲಾರ | ರಾಜಕಾಲುವೆಗೆ 90 ಕೋಟಿ ಅನುದಾನ; ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ನಗರಸಭೆ ಸದಸ್ಯ

Date:

Advertisements

ಕೋಲಾರದ ನಗರಸಭೆ ವ್ಯಾಪ್ತಿಯ ಅಂತರಗಂಗೆ ಬೆಟ್ಟದ ತಪ್ಪಲಿಂದ ಕೋಲಾರಮ್ಮ ರಾಜಕಾಲುವೆ ಅಭಿವೃದ್ಧಿಗೆ ಸಚಿವ ಸಂಪುಟದ ಸಭೆಯಲ್ಲಿ 90 ಕೋಟಿ ಮೀಸಲಿಟ್ಟ ರಾಜ್ಯ ಸರ್ಕಾರಕ್ಕೆ ನಗರಸಭೆ ಸದಸ್ಯ ಎನ್ ಅಂಬರೀಷ್ ಅಭಿನಂದನೆ ಸಲ್ಲಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕೋಲಾರ ನಗರಕ್ಕೆ ವಿಶೇಷವಾಗಿ ಸುಮಾರು 30-40 ವರ್ಷಗಳಿಂದ ಮಳೆಯ ಅಬ್ಬರಕ್ಕೆ ಈ ಭಾಗದ ಹಲವು ಪ್ರದೇಶಗಳು ತತ್ತರಿಸಿದ್ದವು. ಈ ಪೈಕಿ ರಹಮತ್ ನಗರ, ರಾಜಾನಗರ, ಶಾಂತಿನಗರ, ನೂರು ನಗರ, ಮಿಲ್ಲತ್ ನಗರ ಸೇರಿದಂತೆ ಅನೇಕ ಏರಿಯಾಗಳು ಹೆಚ್ಚು ಮಳೆಹಾನಿಗೆ ತುತ್ತಾಗುತ್ತಿದ್ದವು. ಅಂತರಗಂಗೆಯ ತಪ್ಪಲಿನಿಂದ ಕೋಲಾರಮ್ಮನ ಕೆರೆಯವರಿಗೆ ರಾಜಕಾಲುವೆ ದುರಸ್ತಿಯಾಗದೆ ಇದ್ದದ್ದರಿಂದ ಮಳೆಬಂದು ನೀರು ಮನೆಗಳಿಗೆ ನುಗ್ಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ವಸತಿ ಸಚಿವ ಜಮೀರ್ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್ ಎಂಎಲ್ಸಿ ಅನಿಲ್ ಕುಮಾರ್ ರವರು ಸರ್ಕಾರದ ಜೊತೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದು ಸುಮಾರು 90 ಕೋಟಿ ಬಿಡುಗಡೆ ಮಾಡಿಸಿದ್ದಾರೆ. ಸುಮಾರು 60,000 ಜನಸಂಖ್ಯೆ ಇರುವ ಈ ಭಾಗಕ್ಕೆ ಈ ಕಾಮಗಾರಿ ಅತ್ಯಂತ ಉಪಯುಕ್ತವಾದ ಕಾಮಗಾರಿ. ಈ ಭಾಗದಲ್ಲಿ ಶೇಕಡ 90ರಷ್ಟು ಸ್ಲಂ ಪ್ರದೇಶವಾಗಿದ್ದು ಮತ್ತು ಬಡವರು ವಾಸಿಸುತ್ತಿರುವ ಈ ಜಾಗಕ್ಕೆ ಮನ್ನಣೆ ನೀಡಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು” ಎಂದು ಅಂಬರೀಷ್ ತಿಳಿಸಿದ್ದಾರೆ.

WhatsApp Image 2025 07 05 at 9.28.07 AM

ಇದನ್ನೂ ಓದಿ: ಕೋಲಾರ | ಕೋಮುಲ್ ಸರ್ಕಾರಿ ನಾಮ ನಿರ್ದೇಶಕರಾಗಿ ಯೂನುಸ್ ಶರೀಫ್ ನೇಮಕ

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X