ಯಾದಗಿರಿ | ಮಳೆ ರಜೆ: ಖಾಸಗಿ ಶಾಲೆಗಳಿಂದ ಆದೇಶ ಉಲ್ಲಂಘನೆ; ಆರೋಪ

Date:

Advertisements

ಆದೇಶ ಪಾಲನೆ ಮಾಡದ ಹುಣಸಗಿಯ ಎಸ್‌.ಕೆ ಇಂಡಿಪೆಂಡೆಂಟ್‌ ಪಿಯು ಕಾಲೇಜು ಮತ್ತು ಸಾಯಿ ವಿಜ್ಞಾನ ಇಂಗ್ಲಿಷ್ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಯಾದಗಿರಿ ಜಿಲ್ಲಾದ್ಯಂತ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ವರದಿಯನ್ವಯ ವಿದ್ಯಾರ್ಥಿಗಳ ರಕ್ಷಣಾ ಹಿತದೃಷ್ಟಿಯಿಂದ ಜುಲೈ 27ರ ಗುರುವಾರ ಜಿಲ್ಲಾದಾದ್ಯಂತ ರಜೆ ಘೋಷಣೆ ಮಾಡಲಾಗಿತ್ತು. ಆದರೂ ಹುಣಸಗಿ ತಾಲೂಕಿನ ಖಾಸಗಿ ಶಾಲೆಗಳು ಆದೇಶ ಉಲ್ಲಂಘಿಸಿದ್ದು, ತರಗತಿಗಳನ್ನು ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಗೈರಾದ ಮಕ್ಕಳಿಗೂ ಹಾಜರಾತಿ; ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ

Advertisements

“ಶಾಲೆಯಲ್ಲಿ ಮಕ್ಕಳಿಗೆ ಯಾವುದೇ ಮೂಲ ಸೌಕರ್ಯಗಳೂ ಇರುವುದಿಲ್ಲ. ಆದರೂ ಜಿಲ್ಲಾಧಿಕಾರಿ ಆದೇಶಕ್ಕೆ ಅವಮಾನ ಮಾಡಿದಕ್ಕಾಗಿ ಖಾಸಗಿ ಶಾಲೆ ಹಾಗೂ ಮಾಲೀಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಅಗ್ರಹಿಸಿದರು.

ಈ ಸಂದರ್ಭದಲ್ಲಿ ಕಾಶಿನಾಥ ನಟೇಕಾರ, ರಾಹುಲ್ ಕೊಲ್ಲೂರಕರ್, ದೊ.ಸಾಬಣ್ಣ ಕೆ ಶಹಾಪೂರ, ಹಂಪಯ್ಯ ಎಸ್ ಶೇಂಗಿನೋರ, ಬಾಲು ಚಲುವಾದಿ, ಮೌನೇಶ ಯಾಡ್ಡಳ್ಳಿ, ಮರೆಪ್ಪ ಗುರುಸಣಗಿ, ಭೀಮಪ್ಪ ಗೌಂಡಿ ಕ್ಯಾತ್ನಾಳ, ಮಲ್ಲಪ್ಪ ಕುರಕುಂದಿ, ಮಲ್ಲಿಕಾರ್ಜುನ ಕಾಮನೂರ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X