ಕಲಬುರಗಿ | ‘ಇಷ್ಟು ದಿನ ಎಲ್ಲಿಗೆ ಹೋಗಿದ್ರಿ’ ಎಂದು ಬಿಜೆಪಿ ಸಂಸದರಿಗೆ ಅವರ ಕಾರ್ಯಕರ್ತರಿಂದಲೇ ತರಾಟೆ

Date:

Advertisements

ಸಂಸದರಾದ ಮೇಲೆ ಇಷ್ಟು ದಿನ ಎಲ್ಲಿಗೆ ಹೋಗಿದ್ರಿ. ವಿಧಾನಸಭಾ ಚುನಾವಣೆಯ ಸಮಯದಲ್ಲೂ ಕ್ಷೇತ್ರಕ್ಕೆ ಬರಲಿಲ್ಲ. ಈಗ ಬಂದಿದ್ದೀರಾ ಎಂದು ಸಂಸದ ಡಾ. ಉಮೇಶ್‌ ಜಾಧವ್ ಅವರನ್ನು ಬಿಜೆಪಿ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ನಗರದಲ್ಲಿ ಶನಿವಾರ ನಡೆದ ಬಿಜೆಪಿ ಜಿಲ್ಲಾ ಪ್ರಬುದ್ಧರ ಸಭೆಯಲ್ಲಿ ಉಮೇಶ್‌ ಜಾಧವ್‌ ಅವರನ್ನು ಬಿಜೆಪಿ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿದ್ದಾರೆ. ವೇದಿಕೆಯಲ್ಲಿದ್ದ ಇತರರನ್ನು ಕಾರ್ಯಕರ್ತರನ್ನು ತಡೆದು, ಸಮಾಧಾನ ಮಾಡಿದ್ದಾರೆ.

ಸಭೆಯಲ್ಲಿ ಮಾತಾಡಿದ ಜಾಧವ್, “ನನ್ನ ಗೆಲುವಿಗೆ ಎಂಎಲ್‌ಸಿ ಎನ್‌ ರವಿಕುಮಾರ್‌ ಅವರ ಶ್ರಮ ಕಾರಣ. ಕಳೆದ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಹಗಲು-ರಾತ್ರಿ ದುಡಿದಿದ್ದಾರೆ” ಎಂದು ಹೇಳಿದ್ದಾರೆ.

Advertisements

ಅವರ ಮಾತಿನಿಂದ ಸಿಡಿಮಿಡಿಗೊಂಡ ಪಕ್ಷದ ಹಿರಿಯ ಕಾರ್ಯಕರ್ತರು, “ನಾವ್ಯಾರು ನಿಮ್ಮ ಪರವಾಗಿ ಕೆಲಸ ಮಾಡಿಲ್ವಾ? ಮತ ಹಾಕಿಲ್ವಾ? ಒಬ್ಬರನ್ನು ಓಲೈಕೆ ಮಾಡಲು ಬಂದಿದ್ದೀರಾ? ಇಷ್ಟು ದಿನ ಎಲ್ಲಿಗೆ ಹೋಗಿದ್ರಿ?” ಎಂದು ಗಲಾಟೆ ಮಾಡಿದ್ದಾರೆ.

ಗಲಾಟೆ ವೇಳೆ ಮಧ್ಯಪ್ರವೇಶಿಸಿದ ಪಕ್ಷದ ಮುಖಂಡರು ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, “ಸಂಸದರ ಭಾಷಣದ ವೇಳೆ ಹೀಗೆ ವರ್ತಿಸಬಾರದು. ಬಿಜೆಪಿಯ ಶಿಸ್ತನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಗದ್ದಲ ನಿಂತ ಬಳಿಕ ಮಾತನಾಡಿದ ಎಂಎಲ್‌ಸಿ ರವಿಕುಮಾರ್, “ಸಂಸದರ ಗೆಲುವಿಗೆ ಎಲ್ಲ ಕಾರ್ಯಕರ್ತರ ಶ್ರಮವಿದೆ. ಅವರ ಗೆಲುವು ಎಲ್ಲ ಕಾರ್ಯಕರ್ತರ ಗೆಲುವು” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X