ಹಾವೇರಿ | ಕರ್ತವ್ಯಲೋಪ, ಅನಧೀಕೃತ ಗೈರು ಹಾಜರಿ: ಗುತ್ತಲ ಕರವಸೂಲಿಗಾರ ಸೇವೆಯಿಂದ ಅಮಾನತು

Date:

Advertisements

ಕರ್ತವ್ಯಲೋಪ, ಅನಧೀಕೃತ ಗೈರು ಹಾಜರಿ ಹಿನ್ನಲೆಯಲ್ಲಿ ಗುತ್ತಲ ಪಟ್ಟಣ ಪಂಚಾಯತಿಯ ಕರವಸೂಲಿಗಾರ ನಂಜುಂಡಪ್ಪ ಎಫ್. ಗಂಗಮ್ಮನವರ ಸೇವೆಯಿಂದ ಅಮಾನತ್ತಗೊಳಿಸಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ತಾಲ್ಲೂಕು ಪಟ್ಟಣ ಪಂಚಾಯಿತಿ ಕರವಸೂಲಿಗಾರ ನಂಜುಂಡಪ್ಪ ಎಫ್. ಗಂಗಮ್ಮನವರ ಸಾರ್ವಜನಿಕರಿಂದ ತೆರಿಗೆ ಹಣ ವಸೂಲಿ ಮಾಡಿ, ಪಟ್ಟಣ ಪಂಚಾಯತಿಗೆ ಪಾವತಿಸದೇ ಹಣ ದುರುಪಯೋಗಪಡಿಸಿಕೊಂಡ ಬಗ್ಗೆ ಸಾರ್ವಜನಿಕರು ಪಟ್ಟಣ ಪಂಚಾಯತಿಗೆ ದೂರು ಸಲ್ಲಿಸಿದ್ದರು.

ಸಾರ್ವಜನಿಕರ ಹಣ ದುರುಪಯೋಗ ಮೇಲ್ನೋಟಕ್ಕೆ ಕಂಡುಬಂದ ಹಿನ್ನಲೆಯಲ್ಲಿ ಹಾಗೂ ದಿನಾಂಕ 21-03-2024ರಿಂದ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿ ಸಾರ್ವಜನಿಕ ಕೆಲಸಕ್ಕೆ ತೊಂದರೆ ಉಂಟು ಮಾಡಿದ್ದ ದೋಷಾರೋಪಣಾ ಪಟ್ಟಿಯನ್ನು ಜಾರಿ ಮಾಡಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮೊಹರಂ ಆಚರಣೆ; ಜು.5 ರಿಂದ ಮದ್ಯ ಮಾರಾಟ ನಿಷೇಧ

“ನೌಕರನು ದಿನಾಂಕ 20-06-2024 ರಂದು ದೋಷಾರೋಪಣ ಪಟ್ಟಿ ಸ್ವೀಕರಿಸಿದರೂ ಈವರೆಗೆ ಸಮಂಜಸವಾದ ಉತ್ತರ ನೀಡಿರುವುದಿಲ್ಲ. ಈ ನೌಕರನು ಕಚೇರಿ ಕೆಲಸ ಕಾರ್ಯಗಳಲ್ಲಿ ಕರ್ತವ್ಯಲೋಪ ವೆಸಗಿರುವುದರಿಂದ ಮತ್ತು ಸಾರ್ವಜನಿಕರ ಹಣ ದುರುಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಸೇವೆಯಿಂದ ಅಮಾನತ್ ಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X