ಕಲ್ಯಾಣ ಕರ್ನಾಟಕ – ಹೆಸರಿಗೆ ತಕ್ಕಂತೆ ಅರ್ಥ ತರಲು ಬದ್ಧ: ಪ್ರಿಯಾಂಕ್‌ ಖರ್ಗೆ

Date:

Advertisements

ಹಿಂದಿನ ಸರ್ಕಾರದಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರ ಇಡೀ ಮಂಡಳಿಯ ಉದ್ದೇಶಿತ ಹಾದಿಯನ್ನೇ ಮುಳುಗಿಸಿತ್ತು. ಕೇವಲ ಹೆಸರಿಗೆ ₹5,000 ಕೋಟಿ ಹಣ ಕೊಟ್ಟಿರುವುದಾಗಿ ಹೇಳಿ ಮೋಸ ಮಾಡಿದ್ದು, ಅನೇಕ ಕಾನೂನುಗಳನ್ನು ಉಲ್ಲಂಘಿಸಿ ಹಣ ಲೂಟಿ ಮಾಡುವ ಕೆಟ್ಟ ಸಂಪ್ರದಾಯ ಚಾಲ್ತಿಯಲ್ಲಿದ್ದದ್ದು ಕಂಡುಬಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಸಚಿವರೂ ಒಗ್ಗೂಡಿ ಯೋಜನಾ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

“ಭ್ರಷ್ಟಾಚಾರದ ಕಾರಣಗಳಿಂದ ಕಳೆದ ಸಾಲಿನಲ್ಲಿ ಶೇ.26ರಷ್ಟು ಅನುದಾನವನ್ನು ಬಳಸಿಕೊಳ್ಳಲು ಕೆಕೆಆರ್‌ಡಿಬಿಯಿಂದ ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಕಾನೂನು ಮುರಿದು ಅಕ್ರಮಗಳಿಗೆ ಕಾರಣರಾದರೆಲ್ಲರನ್ನೂ ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಲು ಕ್ರಮ ಕೈಗೊಳ್ಳಬೇಕು” ಎಂದು ಯೋಜನಾ ಸಚಿವರಿಗೆ ಮನವಿ ಮಾಡಿದರು.

Advertisements

“ನಮ್ಮ ಭಾಗದ ನಾಯಕ ಮಲ್ಲಿಕಾರ್ಜುನ ಖರ್ಗೆ, ದಿ. ಧರಂ ಸಿಂಗ್ ಮುಂತಾದ ನಾಯಕರ ಅವಿರತ ಶ್ರಮದಿಂದ ಸಾಂವಿಧಾನಿಕ ತಿದ್ದುಪಡಿ ಮಾಡಿ 371(J) ಜಾರಿ ಮಾಡಲಾಯಿತು. ಆದರೆ ಕಳೆದ ನಾಲ್ಕು ವರ್ಷದಲ್ಲಿ ಕಾನೂನನ್ನು ನಿಯಮಗಳಿಗೆ ವಿರುದ್ಧವಾಗಿ ಸಡಿಲಗೊಳಿಸಿ ನಮ್ಮ ಭಾಗದ ಜನರಿಗೆ ಸಿಕ್ಕಿರುವ ಹಕ್ಕನ್ನು ಕಸಿದುಕೊಳ್ಳುವ ಕೆಲಸ ನಡೆಸಲಾಗಿತ್ತು” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಬಲವರ್ಧನೆಗೆ ಸರ್ಕಾರ ಬದ್ಧ: ಸಚಿವ ಬೋಸರಾಜು

“ಕೆಕೆಆರ್‌ಡಿಬಿಯನ್ನು ಮತ್ತೆ ಪ್ರಗತಿಯ ಹಾದಿಗೆ ತರಲು ನಮ್ಮ ಸಂಪೂರ್ಣ ಪ್ರಯತ್ನ ಜಾರಿಯಲ್ಲಿರಲಿದೆ. ಕಲ್ಯಾಣ ಕರ್ನಾಟಕದ ಹೆಸರಿಗೆ ತಕ್ಕಂತೆ ಅರ್ಥ ತರಲು ನಾವು ಬದ್ಧರಾಗಿದ್ದೇವೆ” ಎಂದು ಭರವಸೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X