‘ಇಂಡಿಯಾ’ ನಾಯಕರ ಮಣಿಪುರ ಭೇಟಿ ತೋರಿಕೆಯಷ್ಟೆ ಎಂದ ಅನುರಾಗ್‌ ಠಾಕೂರ್

Date:

Advertisements

ಕಳೆದ 3 ತಿಂಗಳಿನಿಂದ ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಈಶಾನ್ಯ ರಾಜ್ಯ ಮಣಿಪುರಕ್ಕೆ ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ನಾಯಕರು ಶನಿವಾರ ಭೇಟಿ ನೀಡಿರುವುದರ ಬಗ್ಗೆ ಬಿಜೆಪಿ ಕಿಡಿಕಾರಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್, ಇವೆಲ್ಲಾ ಕೇವಲ ತೋರಿಕೆಯಷ್ಟೆ. ರಾಜಸ್ತಾನ, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ವಿರುದ್ಧ ಹೇಯ ಕೃತ್ಯಗಳು ನಡೆದಿವೆ. ಆಗೇಕೆ ಈ ನಾಯಕರು ಆ ರಾಜ್ಯಗಳಿಗೆ ಭೇಟಿ ನೀಡಲಿಲ್ಲ. ವಿಪಕ್ಷಗಳ ಮಣಿಪುರ ಭೇಟಿ ಕೇವಲ ನಾಟಕವಷ್ಟೇ. ಇಂಡಿಯಾ ಮೈತ್ರಿಕೂಟದ ನಾಯಕರು ಮಣಿಪುರದಿಂದ ವಾಪಸ್ಸಾದ ಬಳಿಕ ಪಶ್ಚಿಮ ಬಂಗಾಳಕ್ಕೂ ಕರೆದುಕೊಂಡು ಹೋಗುವಂತೆ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ“ ಎಂದು ತಿಳಿಸಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ವಿರುದ್ಧ ನಡೆದ ಕೃತ್ಯಗಳನ್ನು ಅಧೀರ್ ರಂಜನ್ ಚೌಧರಿಯವರು ಸಮರ್ಥಿಸಿಕೊಳ್ಳುತ್ತಾರೆಯೇ? ಈ 21 ಸಂಸದರು ರಾಜಸ್ಥಾನ, ಪಶ್ಚಿಮ ಬಂಗಾಳ ರಾಜ್ಯಗಳಿಗೂ ಭೇಟಿ ನೀಡಿ ವರದಿ ನೀಡುತ್ತಾರೆಯೇ“ ಎಂದು ಪ್ರಶ್ನಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಣಿಪುರಕ್ಕೆ ಭೇಟಿ ನೀಡಿದ ‘ಇಂಡಿಯಾ’ ಒಕ್ಕೂಟದ 21 ಸಂಸದರ ನಿಯೋಗ

“ಹತ್ಯೆಗಳ ಮೂಲಕ ಮಮತಾ ಬ್ಯಾನರ್ಜಿ ಸರ್ಕಾರ ಅಧಿಕಾರ ಹಿಡಿಯುತ್ತಿರುವ ವಿಧಾನವನ್ನು ಕಾಂಗ್ರೆಸ್ ವಿರೋಧಿಸುತ್ತದೆಯೇ? ಮಹಿಳೆಯರ ವಿರುದ್ಧ ಅಪರಾಧಗಳು ನಡೆಯುತ್ತಿರುವ ರಾಜಸ್ಥಾನಕ್ಕೆ ಇಂಡಿಯಾ ಒಕ್ಕೂಟದ ಸದಸ್ಯರು ಭೇಟಿ ನೀಡಿ ವರದಿಗಳನ್ನು ಸಲ್ಲಿಸುತ್ತಾರೆಯೆ?” ಎಂದು ಅನುರಾಗ್‌ ಠಾಕೂರ್‌ ಪ್ರಶ್ನಿಸಿದರು.

ಜನಾಂಗೀಯ ಪೀಡಿತ ಮಣಿಪುರದ ಪರಿಸ್ಥಿತಿಯನ್ನು ಅವಲೋಕಿಸಲು ವಿರೋಧ ಪಕ್ಷ ಇಂಡಿಯಾ ಒಕ್ಕೂಟದ 21 ಸಂಸದರ ನಿಯೋಗ ಶನಿವಾರ ಇಂಫಾಲ್ ತಲುಪಿದೆ.

ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಸಂಭವಿಸಿದ ಜನಾಂಗೀಯ ಘರ್ಷಣೆಯ ಸಂತ್ರಸ್ತರನ್ನು ಭೇಟಿ ಮಾಡಲು ತಂಡವು ಹಲವಾರು ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದೆ. ಹಿಂಸಾಚಾರದಲ್ಲಿ ಇಲ್ಲಿಯವರೆಗೆ 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X