ಬೆಂಗಳೂರು | ಮೀಸಲಾತಿ ನಿಯಮ ಉಲ್ಲಂಘನೆ; 67 ದಲಿತ ಪ್ರಾಧ್ಯಾಪಕರಿಂದ ಕುಲಪತಿಗೆ ಪತ್ರ

Date:

Advertisements

ಸರ್ಕಾರದ ಮೀಸಲಾತಿ ನಿಯಮವನ್ನು ಉಲ್ಲಂಘಿಸಿ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಿಂದ ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಪೋಸ್ಟ್ ರಹಿತವಾಗಿ ಹಲವರನ್ನು ಸೇರ್ಪಡೆ ಮಾಡಿಕೊಂಡಿರುವುದರ ವಿರುದ್ಧ 15 ದಿನಗಳೊಳಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಂಗಳೂರು ವಿವಿಯ 67 ದಲಿತ ಪ್ರಾಧ್ಯಾಪಕರುಗಳು ಕುಲಪತಿ ಡಾ.ಜಯಕರ ಎಸ್ ಎಂ ಅವರಿಗೆ ಪತ್ರ ಬರೆದಿದ್ದಾರೆ.

ಡಾ.ಎಂ ಶಶಿಧರ್, ಪ್ರೊ. ಮುರಳೀಧರ ಬಿ ಎಲ್, ಪ್ರೊ. ಆರ್ ಲಕ್ಷ್ಮೀನಾರಾಯಣ, ಡಾ. ಲಕ್ಷ್ಮೀಶ ಟಿ ಆರ್, ಪ್ರೊ. ಡಿ ಸಿ ಮೋಹನ, ಡಾ. ಟಿ ಜಿ ಉಮೇಶ, ಡಾ. ವಾಣೀಶ್ರೀ ಕೊಪ್ಪದ, ಡಾ. ಮಂಜುನಾಥ ಎಚ್, ಡಾ. ಸುರೇಶ್ ಆರ್, ಡಾ. ಎಸ್ ನಾಗರತ್ನಮ್ಮ, ಡಾ.‌ ವೀಣಾದೇವಿ, ಡಾ. ಆರ್ ಗೀತಾ, ಡಾ. ಎಸ್ ವೈ ಸುರೇಂದ್ರ ಕುಮಾರ್, ಡಾ. ರಾಘವೇಂದ್ರ ಎಚ್ ಕೆ, ಡಾ. ಡಿ ಕೆ ಪ್ರಭಾಕರ್, ಡಾ. ರೇಣುಕಾ ಸಿ ಜಿ, ಡಾ. ಶಿವಣ್ಣ ಎಸ್, ಪ್ರೊ. ಪಿ ಸಿ ನಾಗೇಶ್, ಪ್ರೊ. ಕೃಷ್ಣಸ್ವಾಮಿ, ಡಾ. ಕೆ ರಾಮಕೃಷ್ಣಯ್ಯ, ಡಾ. ಜಿ ಕೃಷ್ಣಮೂರ್ತಿ ಸೇರಿದಂತೆ 67 ಪ್ರಾಧ್ಯಾಪಕರು ಪತ್ರದಲ್ಲಿ ಸಹಿ ಹಾಕಿದ್ದಾರೆ.

ಬೆಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕರ ಪರಿಷತ್ತು ಬೇರೆ ವಿಶ್ವವಿದ್ಯಾಲಯಗಳಿಂದ ಶಿಕ್ಷಕರನ್ನು ವರ್ಗಾವಣೆ ಮಾಡಿಕೊಂಡಿರುವುದರಿಂದ ಇಲ್ಲಿ ಅನೇಕ ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಪೋಸ್ಟ್ ರಹಿತವಾಗಿ ಶಿಕ್ಷಕರನ್ನು ವರ್ಗಾಯಿಸಿಕೊಂಡರೆ ಬೆಂವಿವಿಗೆ ಮುಂದಿನ ದಿನಗಳಲ್ಲಿ ನೇಮಕಾತಿಗೆ ತೊಂದರೆಯಾಗುತ್ತದೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ.

Advertisements

ವರ್ಗಾವಣೆಯಾದ ಶಿಕ್ಷಕರಲ್ಲಿ ಯಾರೊಬ್ಬರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿಲ್ಲ. ಈವರೆಗೂ ವರ್ಗಾವಣೆಗೊಂಡ ಶಿಕ್ಷಕರನ್ನು ಯಾವ ರೋಸ್ಟರ್ ಬಿಂದುಗೆ ಸೇರಿಸಲಾಗಿದೆ ಎಂಬುದನ್ನು ವಿವಿ ನಿರ್ಧರಿಸಿರುವುದಿಲ್ಲ. ಇದು ಸರಕಾರದ ಮೀಸಲಾತಿ ನೀತಿಗೆ ವಿರುದ್ಧವಾಗಿದೆ. ಅಷ್ಟೇ ಅಲ್ಲದೇ ಬೆಂವಿವಿಯಲ್ಲಿ ಖಾಲಿಯಿರುವ 22 ಶಿಕ್ಷಕರ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ವಿವಿ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಬಿಬಿಎಂಪಿಯ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ಹೂಡಿ: ಆಪ್ ಆಗ್ರಹ

“ಬಹುಸಂಖ್ಯಾತ ದಲಿತರಿರುವ ವಿವಿಯಲ್ಲಿ ದಲಿತರ ಮಾನ್ಯತೆಯನ್ನು ಕುಗ್ಗಿಸಲು, ಸರ್ಕಾರದ ರೋಸ್ಟರ್ ಪದ್ಧತಿಯನ್ನು ಧಿಕ್ಕರಿಸಿ, ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ವಿವಿಯ ಈ ಕ್ರಮವನ್ನು ಖಂಡಿಸುತ್ತೇವೆ. ಆದುದರಿಂದ ತಾವು ಈ ಕೂಡಲೇ ಉಳಿದ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಂಡು, ವಿವಿಗೆ ವರ್ಗಾವಣೆಗೊಂಡ ಶಿಕ್ಷಕರ ಸೇವಾ ಹಿರಿತನ ಹಾಗೂ ವರ್ಗಾವಣೆಗೊಂಡ ಶಿಕ್ಷಕರ ರೋಸ್ಟರ್ ಅನುಪಾತವನ್ನು ನಿರ್ಧರಿಸಿ ಕೂಡಲೇ ಆದೇಶ ಹೊರಡಿಸಬೇಕು. ತಪ್ಪಿದ್ದಲ್ಲಿ ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು” ಎಂದು ಪ್ರಾಧ್ಯಾಪಕರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X