ತುಮಕೂರು | ತಂಬಾಗನ್ನ ಹಟ್ಟಿಗೆ ನ್ಯಾ. ನೂರುನ್ನೀಸಾ ಭೇಟಿ; ಕಾನೂನು ಅರಿವು ಅಭಿಯಾನ

Date:

Advertisements

ತುಮಕೂರು ಜಿಲ್ಲೆಯ ಮಲ್ಲೇನಹಳ್ಳಿ ಸಮೀಪದ ಗೊಲ್ಲರಹಟ್ಟಿಯಲ್ಲಿ ಮೌಢ್ಯಚಾರಣೆ ಕಾರಣದಿಂದ ಬಾಣಂತಿ ಮತ್ತು ನವಜಾತ ಶಿಶುವನ್ನು ಮನೆಯಿಂದ ಹೊರಗಿಟ್ಟು ಮಗು ಮೃತಪಟ್ಟ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪ್ರಕರಣ ಸಂಬಂಧ ಸಂತ್ರಸ್ತೆಯ ಪತಿ ಹಾಗೂ ಆಕೆಯ ತಂದೆಯ ವಿರುದ್ದ ಕರ್ನಾಟಕ ಅಮಾನವೀಯ ದುಷ್ಟ ಪದ್ಧತಿಗಳು ಹಾಗೂ ವಾಮಾಚಾರ ಇವುಗಳ ಪ್ರತಿಬಂಧ ಮತ್ತು ನಿರ್ಮೂಲನೆ ಕಾಯಿದೆ – 2017 ಹಾಗೂ ಐಪಿಸಿ ಅಧಿನಿಯಮ 304, 34ರಡಿ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಂಬಾಗನ್ನ ಹಟ್ಟಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಈ ಸಂಬಂಧ ಪ್ರಕರಣ ದಾಖಲಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ನೂರುನ್ನೀಸಾ ಅವರ ಸೂಚನೆ ಬಳಿಕ ಪ್ರಕರಣ ಸಂಬಂಧ ಪ್ರಥಮ ವರ್ತಮಾನ ವರದಿ ದಾಖಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ನೂರುನ್ನೀಸಾ ಅವರು ತುಮಕೂರು ಜಿಲ್ಲೆಯ ತಂಬಾಗನ್ನ ಹಟ್ಟಿಗೆ ಭೇಟಿ ನೀಡಿದ್ದು, ಕಾನೂನು ಅರಿವು ಮೂಲಕ ನಾಗರೀಕರಣ ಅಭಿಯಾನವನ್ನು ಹಮ್ಮಿಕೊಂಡು, ಪೋಕ್ಸೊ ಕಾಯ್ದೆ ಹಾಗೂ ಕರ್ನಾಟಕ ಅಮಾನವೀಯ ಕೆಟ್ಟ ಪದ್ಧತಿ ಪ್ರತಿಬಂಧ ಮತ್ತು ನಿರ್ಮೂಲನೆ ಅಧಿನಿಯಮ -2017 ಮೊದಲಾದ ಕಾನೂನುಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಊರಾಚೆ ಗುಡಿಸಲಲ್ಲಿ ಮಗು ಸಾವು ಪ್ರಕರಣ; ಮೂವರ ವಿರುದ್ಧ ಪ್ರಕರಣ ದಾಖಲು

ತಂಬಾಗನ್ನ ಹಟ್ಟಿಯ ಮನೆಗಳಿಗೆ ಭೇಟಿ ನೀಡಿದ ನ್ಯಾಯಾಧೀಶರು ಬಾಣಂತಿ ಹಾಗೂ ಹಸುಗೂಸು ಮನೆಯ ಪ್ರತ್ಯೇಕ ಕೊಠಡಿಯಲ್ಲಿರುವುದನ್ನು ಕಂಡು ಮಾತನಾಡಿಸಿ ಹರ್ಷ ವ್ಯಕ್ತಪಡಿಸಿ, ಇದೇ ರೀತಿ ಜನರಲ್ಲಿ ಮಾನವೀಯತೆ ಹಾಗೂ ಮೌಢ್ಯಚಾರಣೆ ವಿರುದ್ಧ ಅರಿವು ಮೂಡಬೇಕು ಎಂದರು

ಈ ಸಂದರ್ಭದಲ್ಲಿ ಗೊಲ್ಲರ ಸಮುದಾಯದ ರಾಜ್ಯ ಅದ್ಯಕ್ಷರು, ಜಿಲ್ಲಾ ಅಧ್ಯಕ್ಷ, ಸಮುದಾಯದ ಚಲನಚಿತ್ರ ಸಂಗೀತಗಾರ ಮೋಹನ್, ತಹಶೀಲ್ದಾರ್, ಸ್ಥಳೀಯ ಜನಪ್ರತಿನಿಧಿಗಳು, ಪಂಚಾಯತ್ ಸದಸ್ಯರು ಹಾಗೂ ಊರಿನ ಮುಖಂಡರು ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X