ಪ್ರತಿದಿನ ಅರ್ಧ ಗಂಟೆ ಫೋನ್, ಲ್ಯಾಪ್‌ಟಾಪ್ ಆಫ್: ಗಾಝಾ ಪರ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ನೀಡಿದ ಸಿಪಿಐಎಂ

Date:

Advertisements

ಗಾಝಾ ಪರವಾಗಿ ಒಗ್ಗಟ್ಟು ಪ್ರದರ್ಶಿಸುವ ನಿಟ್ಟಿನಲ್ಲಿ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಭಾರತೀಯ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಕರೆ ನೀಡಿದೆ. ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಎಂ.ಎ. ಬೇಬಿ ಅವರು ಗಾಜಾ ಯುದ್ಧವನ್ನು ಪ್ರತಿಭಟಿಸಿ ಒಂದು ವಾರ ‘ಡಿಜಿಟಲ್ ಸತ್ಯಾಗ್ರಹ’ ನಡೆಸಲು ಕರೆ ನೀಡಿದ್ದಾರೆ.

ಶನಿವಾರ ರಾತ್ರಿಯಿಂದ ಪ್ರತಿದಿನ ರಾತ್ರಿ 9ರಿಂದ ರಾತ್ರಿ 9.30ರವರೆಗೆ ಜನರು ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್ ಅಥವಾ ಡೆಸ್ಕ್‌ಟಾಪ್‌ಗಳಂತಹ ತಮ್ಮ ಸಾಧನಗಳನ್ನು ಸ್ವಿಚ್ ಆಫ್ ಮಾಡುವಂತೆ ಸಿಪಿಐಎಂ ನಾಯಕರು ಒತ್ತಾಯಿಸಿದ್ದಾರೆ. ಈ ಮೂಲಕ ಇಸ್ರೇಲ್ ಅನ್ನು ಬೆಂಬಲಿಸುತ್ತಿರುವ ವಿಶ್ವದ ಕಾರ್ಪೊರೇಟ್‌ಗಳ ಆರ್ಥಿಕತೆಗೆ ಪೆಟ್ಟು ನೀಡಿ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸಿಪಿಐ(ಎಂ)ಗೆ ಎಂ ಎ ಬೇಬಿ ಸಾರಥ್ಯ; ಪಕ್ಷವನ್ನು ತಳಮಟ್ಟದಿಂದ ಕಟ್ಟುವರೇ?

Advertisements

“ಗಾಝಾದಲ್ಲಿ ಲಕ್ಷಾಂತರ ಜನರನ್ನು ಹಸಿವಿನ ಸಾವಿಗೆ ದೂಡುತ್ತಿರುವ, ಯುದ್ಧಕ್ಕೇನೂ ಸಂಬಂಧವಿಲ್ಲದ ಹತ್ತಾರು ಸಾವಿರ ಮಹಿಳೆ, ಮಕ್ಕಳನ್ನು ಕೊಂದ ಇಸ್ರೇಲ್‌ನ ಅಮಾನುಷ ಸಾಮೂಹಿಕ ಜನ ಹತ್ಯೆಯ ವಿರುದ್ಧ ನಿಮ್ಮ ಮನ ಮಿಡಿಯುತ್ತಿದೆಯಲ್ಲವೇ? ಹಾಗಿದ್ದರೆ ದಯವಿಟ್ಟು ಈ ಡಿಜಿಟಲ್ ಸತ್ಯಾಗ್ರಹದಲ್ಲಿ ಭಾಗವಹಿಸಿ. ಜಗತ್ತಿನ ಕೋಟ್ಯಾಂತರ ಜನರೊಂದಿಗೆ ಭಾರತದ ದನಿ ಜೋಡಿಸಿ” ಎಂದು ಸಿಪಿಐಎಂನ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ಯ ಹರಿದಾಡುತ್ತಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎಂಎ ಬೇಬಿ ಅವರು, “ಗಾಝಾಗಾಗಿ ಡಿಜಿಟಲ್ ಸತ್ಯಾಗ್ರಹ. ನಾವು ಸಾಮಾನ್ಯ ನಾಗರಿಕರೂ ಗಾಝಾದಲ್ಲಿ ಇಸ್ರೇಲ್ ಇಸ್ರೇಲ್ ನಡೆಸುತ್ತಿರುವ ನರಮೇಧದ ವಿರುದ್ಧ ಏನಾದರೂ ಮಾಡಬಹುದು ಎಂಬುದನ್ನು ಬಲವಾಗಿ ನಾವು ತೋರಿಸಬೇಕು. ಯಾವುದೇ ಸಾಮಾಜಿಕ ಮಾಧ್ಯಮ, ಸಂದೇಶಗಳು, ಕಾಮೆಂಟ್‌ಗಳು ಅರ್ಧ ಗಂಟೆ ಇರದು” ಎಂದು ಹೇಳಿದ್ದಾರೆ.

ವಿಶ್ವಸಂಸ್ಥೆಯ ವಿಶೇಷ ವರದಿಗಾರ ಫ್ರಾನ್ಸೆಸ್ಕಾ ಅಲ್ಬನೀಸ್ ಅವರು ಇತ್ತೀಚೆಗೆ ಒಂದು ವರದಿಯನ್ನು ಬಿಡುಗಡೆ ಮಾಡಿದ್ದಾರೆ. ವರದಿ ಪ್ರಕಾರ ಗೂಗಲ್, ಅಮೆಜಾನ್, ಮೈಕ್ರೋಸಾಫ್ಟ್ ಮತ್ತು ಐಬಿಎಂನಂತಹ 48 ಪ್ರಮುಖ ತಂತ್ರಜ್ಞಾನ ಕಂಪನಿಗಳು ಗಾಝಾ ಯುದ್ಧದಿಂದ ಲಾಭ ಗಳಿಸುತ್ತಿದೆ. ಅಂತಹ ಒಂದು ಸಾವಿರಕ್ಕೂ ಅಧಿಕ ಕಾರ್ಪೋರೇಟ್‌ ಘಟಕಗಳ ಪಟ್ಟಿಯನ್ನು ಈ ವರದಿಯಲ್ಲಿ ಮಾಡಲಾಗಿದೆ. ಈ ವರದಿ ಬೆನ್ನಲ್ಲೇ ಸಿಪಿಐಎಂ ಡಿಜಿಟಲ್ ಸತ್ಯಾಗ್ರಹಕ್ಕೆ ಕರೆ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X