ಎರಡನೇ ಟೆಸ್ಟ್ | ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ ಭರ್ಜರಿ ಜಯ; ಮಿಂಚಿದ ಆಕಾಶ್ ದೀಪ್

Date:

Advertisements

ಎಡ್ಜ್‌ಬಾಸ್ಟನ್‌ನಲ್ಲಿ ಭಾನುವಾರ ಮುಕ್ತಾಯಗೊಂಡ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ, 336 ರನ್‌ಗಳ ಬೃಹತ್‌ ಅಂತರದಿಂದ ಗೆದ್ದುಕೊಂಡಿತು.

ತೀವ್ರ ಕುತೂಹಲದ ಹಂತ ತಲುಪಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ, ಎರಡನೇ ಇನಿಂಗ್ಸ್‌ನಲ್ಲಿ 608 ರನ್‌ಗಳ ಬೃಹತ್‌ ಮೊತ್ತವನ್ನು ಬೆನ್ನಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್‌ ತಂಡ, ನಾಲ್ಕನೇ ದಿನದಾಟ ಅಂತ್ಯಕ್ಕೆ 72 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿತ್ತು.

ಕೊನೆಯ ದಿನ 536 ರನ್‌ ಗಳಿಸಬೇಕಿತ್ತು. ಭಾರತ ಗೆಲುವು ಸಾಧಿಸಲು 7 ಆಂಗ್ಲ ಪಡೆಯ 7 ವಿಕೆಟ್‌ಗಳನ್ನು ಕಬಳಿಸಬೇಕಿತ್ತು.

Advertisements

ಟೀಮ್ ಇಂಡಿಯಾದ ಸಂಘಟಿತ ಬೌಲಿಂಗ್ ಎದುರಿಸುವಲ್ಲಿ ವಿಫಲವಾದ ಬೆನ್ ಸ್ಟೋಕ್ಸ್ ನೇತೃತ್ವದ ಆಂಗ್ಲನ್ನರು, 271 ರನ್ ಗಳಿಸುವ ವೇಳೆಗೆ ಆಲೌಟ್ ಆದರು. ಎಡ್ಜ್ ಬಾಸ್ಟನ್‌ನಲ್ಲಿ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಗೆದ್ದು, ಐತಿಹಾಸಿಕ ಸಾಧನೆ ಮಾಡಿದೆ.

ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಬುಮ್ರಾ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದ ವೇಗದ ಬೌಲರ್ ಆಕಾಶ್ ದೀಪ್, ಎರಡನೇ ಇನ್ನಿಂಗ್ಸ್‌ನಲ್ಲಿ ಮಾರಕ ಬೌಲಿಂಗ್ ನಡೆಸುವ ಮೂಲಕ ಪ್ರಮುಖ 6 ವಿಕೆಟ್‌ಗಳನ್ನು ಪಡೆಯುವ ಮೂಲಕ ಮಿಂಚಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಆಕಾಶ್ ದೀಪ್ ನಾಲ್ಕು ವಿಕೆಟ್ ಪಡೆದಿದ್ದರು. ಒಟ್ಟಾರೆಯಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 10 ವಿಕೆಟ್ ಪಡೆದು ಮಿಂಚಿದ್ದಾರೆ.

ಉಳಿದಂತೆ ಟೀಮ್ ಇಂಡಿಯಾ ಪರವಾಗಿ 2ನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ವಿಭಾಗದಲ್ಲಿ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯವು ಕ್ರಿಕೆಟ್ ಕಾಶಿ ಎಂದೇ ಪರಿಗಣಿತವಾಗಿರುವ ಲಾರ್ಡ್ಸ್ ಮೈದಾನದಲ್ಲಿ ಜುಲೈ 10ರಿಂದ ಆರಂಭವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾಕಪ್​ಗೆ ಅಚ್ಚರಿಯ ಭಾರತ ತಂಡ ಪ್ರಕಟ; ಹಲವರಿಗೆ ಕೊಕ್‌, ಪ್ರಮುಖರ ಆಗಮನ

ಮಹತ್ವದ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ...

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

Download Eedina App Android / iOS

X