‘ಕೋವಿಡ್‌ ಲಸಿಕೆಯಿಂದ ಹೃದಯಾಘಾತ’ – ಆರೋಪ ಅಲ್ಲಗಳೆದ ಸಚಿವ ದಿನೇಶ್‌ ಗುಂಡೂರಾವ್‌

Date:

Advertisements

ಕೋವಿಡ್‌ ಲಸಿಕೆ ಹಠಾತ್‌ ಹೃದಯಾಘಾತಕ್ಕೆ ನೇರ ಕಾರಣವಲ್ಲ ಎಂದು ಆರೋಗ್ಯ ಇಲಾಕೆಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿ, ಕೋವಿಡ್‌ ಲಸಿಕೆಯಿಂದ ಹೃದಯಾಘಾತವಾಗುತ್ತದೆ ಎನ್ನುವ ಆರೋಪವನ್ನು ಅಲ್ಲಗಳೆದಿದ್ದಾರೆ.

“ಕೋವಿಡ್ ಪಾಸಿಟಿವ್ ಬಂದವರಲ್ಲಿ ಕೆಲವರಿಗೆ ಹೃದಯಾಘಾತ ಆಗಿದೆ. ಆದರೆ, ಅದು ಕೋವಿಡ್ ಲಸಿಕೆ ಯಿಂದ ಅಲ್ಲ. ಕೋವಿಡ್ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಕೋವಿಡ್ ಬಂದಾಗ ಸೇವಿಸಿದ ಬೇರೆ ಔಷಧಗಳಿಂದ ಪರಿಣಾಮ ಆಗಿದೆ” ಎಂದು ತಿಳಿಸಿದರು.

“ಕೋವಿಡ್-19 ನಿಂದ ಗುಣಮುಖರಾದವರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಿವೆ. ಹೃದಯಾಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗುವುದು ಎಂದು ಹೇಳಿದರು.

“ಕೊರೊನಾ ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕೇಜ್ ಆಗುವ ಸಾಧ್ಯತೆ ಇದೆ. ಆದರೆ, ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರ ಮಟ್ಟಿಗೆ ಇಲ್ಲ. ಕೊರೊನಾ ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಆದರೆ, ಎಂಆರ್​ಎನ್​ಎ ವ್ಯಾಕ್ಸಿನ್ ಬಗ್ಗೆ ಸ್ವಲ್ಪ ಅನುಮಾನ ಇದೆ. ಈ ವ್ಯಾಕ್ಸಿನ್​ ಅನ್ನು ನಮ್ಮ ದೇಶದಲ್ಲಿ ಯಾರು ತೆಗೆದುಕೊಂಡಿಲ್ಲ” ಎಂದರು.‌

ಈ ಸುದ್ದಿ ಓದಿದ್ದೀರಾ? ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರ ಬಳಸಿಕೊಂಡಿದ್ದೆಷ್ಟು? ಇಲ್ಲಿದೆ ನೋಡಿ…

“ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುವುದು. ಪಠ್ಯಪುಸ್ತಕದಲ್ಲಿ ಹೃದಯಾಘಾತದ ಕುರಿತು ಪ್ರತ್ಯೇಕ ಪಠ್ಯ ಅಳವಡಿಸಲು ಶಿಕ್ಷಣ ಇಲಾಖೆಗೆ ಸೂಚಿಸಲಾಗುವುದು. ಎಲ್ಲ ತಾಲ್ಲೂಕು ಆಸ್ಪತ್ರೆಗಳಿಗೆ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲಾಗುವುದು” ಎಂದು ಹೇಳಿದರು.

“ಬೊಜ್ಜು, ಮಧುಮೇಹ ಮತ್ತಿತರ ಸಮಸ್ಯೆಗಳೂ ಹೃದಯಾಘಾತಕ್ಕೆ ಕಾರಣವಾಗಿದೆ. ಹಠಾತ್ ಹೃದಯಘಾತದ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಆದೇಶಿಸಿದ್ದರು. ಹೀಗಾಗಿ, ಡಾ. ರವೀಂದ್ರಾಥ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ವರದಿ ನೀಡಿದೆ” ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

Download Eedina App Android / iOS

X