ಗುಬ್ಬಿ | ಜೆಡಿಎಸ್ ಮುಖಂಡ ನಾಗರಾಜು ಹುಟ್ಟುಹಬ್ಬಕ್ಕೆ ಹೃದಯ ತಪಾಸಣಾ ಶಿಬಿರ

Date:

Advertisements

ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಅವರ 50 ನೇ ಹುಟ್ಟುಹಬ್ಬದ ಪ್ರಯುಕ್ತ ಇದೇ ತಿಂಗಳ 10 ರಂದು ಗುಬ್ಬಿ ಪಟ್ಟಣದ ಬಂಗ್ಲೋಪಾಳ್ಯ ಶಾಲಾ ಮೈದಾನದಲ್ಲಿ ಹೃದಯ ತಪಾಸಣಾ ಶಿಬಿರವನ್ನು ಆಯೋಜಿಸಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆ ಸೇರಿದಂತೆ ಇತರೆ ಸಾಮಾಜಿಕ ಕಳಕಳಿಯ ಕೆಲಸ ಮಾಡುವ ನಾಗರಾಜು ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಯೋಗಾನಂದಕುಮಾರ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿ ಪರಾಭವಗೊಂಡ ನಾಗರಾಜು ಅವರು ತಾಲ್ಲೂಕಿನ ಮನೆ ಮಾತಾಗಿದ್ದಾರೆ. ಅವರ 50 ನೇ ಹುಟ್ಟುಹಬ್ಬ ಅದ್ದೂರಿ ಜೊತೆಗೆ ಸಮಾಜ ಸೇವಕಾರ್ಯದ ಮೂಲಕ ಗುರುತಿಸಿಕೊಳ್ಳಲು ಪ್ರಸ್ತುತ ಸಮಾಜದಲ್ಲಿ ಗಂಭೀರವಾದ ಹೃದಯಾಘಾತ ನಿದರ್ಶನಕ್ಕೆ ಸ್ಪಂದಿಸಿ ನಾಗರಾಜು ಅವರು ಸೂಚನೆ ಮೇರೆಗೆ ಹೃದಯ ತಪಾಸಣಾ ಶಿಬಿರ ಮೂಲಕ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಈ ಶಿಬಿರಕ್ಕೆ ಹೆಸರಾಂತ ವೈದ್ಯರ ತಂಡ ಬರಲಿದೆ. ಜೊತೆಗೆ ಆರೋಗ್ಯ ಶಿಬಿರ ಹಾಗೂ ರಕ್ತದಾನ ಶಿಬಿರ ಕೂಡಾ ಜೆಡಿಎಸ್ ಕಾರ್ಯಕರ್ತರು ಆಯೋಜಿಸಿ ರಕ್ತದಾನ ಮಾಡಲಿದ್ದಾರೆ ಎಂದರು.

ಪಪಂ ಮಾಜಿ ಅಧ್ಯಕ್ಷ ಜಿ.ಡಿ.ಸುರೇಶಗೌಡ ಮಾತನಾಡಿ ಜೆಡಿಎಸ್ ಪಕ್ಷ ಸಂಘಟನೆಯ ಮೂಲಕ ತಾಲ್ಲೂಕಿನಲ್ಲಿ ತನ್ನದೇ ವರ್ಚಸ್ಸು ಬೆಳೆಸಿಕೊಂಡ ನಾಗರಾಜು ಅವರ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆಗೆ ಅವರ ಅಭಿಮಾನಿಗಳು ಸಕಲ ಸಿದ್ಧತೆ ನಡೆಸಿದ್ದಾರೆ. ಇದೇ ತಿಂಗಳ 10 ಗುರುವಾರ ಬೆಳಿಗ್ಗೆ ನಡೆಯುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸೋಮಣ್ಣ ಸೇರಿದಂತೆ ಇನ್ನಿತರ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಮೈತ್ರಿ ಹಿನ್ನಲೆ ಜೆಡಿಎಸ್ ಬಿಜೆಪಿ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

Advertisements

ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ಹಾಗೂ ಎಂ.ಜಿ.ಶಿವಲಿಂಗಯ್ಯ ಮಾತನಾಡಿ ಜೆಡಿಎಸ್ ವರಿಷ್ಟರಿಗೂ ಆಹ್ವಾನ ನೀಡಿದ್ದೇವೆ. ಕುಮಾರಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ಬರುವ ಸಾಧ್ಯತೆ ಇದ್ದು ಎಲ್ಲಾ ರೀತಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ. ಸುಮಾರು 5 ಸಾವಿರ ಕಾರ್ಯಕರ್ತರ ನಡುವೆ ಹುಟ್ಟುಹಬ್ಬ ಆಚರಣೆ ಹಾಗೂ ರಕ್ತದಾನ ಮತ್ತು ಆರೋಗ್ಯ ಶಿಬಿರ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಚನ್ನಬಸವಣ್ಣ, ವೆಂಕಟೇಶ್, ಪ್ರಕಾಶ್, ಜಿ.ಎಂ.ಶಿವಾನಂದ್, ಚಂದು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X