ಮಂಡ್ಯ | ಕೆಲಸ ನೀಡದ ಕೂಲಿಕಾರರ ವಿರೋಧಿ ಸಿಇಒ ವರ್ಗಾವಣೆ ಆಗಬೇಕು: ಸಿಪಿಐಎಂ

Date:

Advertisements

ಕಳೆದ ಮೂರು ತಿಂಗಳಿನಿಂದ ಕೂಲಿಕಾರರಿಗೆ ಕೆಲಸ ನೀಡದೆ ಕೂಲಿಕಾರರ ವಿರೋಧಿಯಾಗಿ ಅಹಂಕಾರದಿಂದ ವರ್ತಿಸುತ್ತಿರುವ ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಕೆ ಆರ್ ಅವರನ್ನು ಕೂಡಲೇ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದ)ದ ಜಿಲ್ಲಾ ಕಾರ್ಯದರ್ಶಿ ಟಿ ಎಲ್ ಕೃಷ್ಣೇಗೌಡ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಜನತೆಯ, ಅದರಲ್ಲೂ ಬಡವರ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲದ ಈ ಅಧಿಕಾರಿಗೆ ಜನರೊಡನೆ ನೇರವಾಗಿ ಸಂಪರ್ಕವಿರುವ ಯಾವುದೇ ಹುದ್ದೆ ನೀಡಬಾರದು. ಅವರು ಮಂಡ್ಯ ಜಿಲ್ಲೆಯ ನಿವಾಸಿಯಾಗಿದ್ದು, ಸ್ಥಳೀಯರೂ ಆಗಿದ್ದಾರೆ. ಸ್ಥಳೀಯರನ್ನು ಇಂತಹ ಜವಾಬ್ದಾರಿ ಹುದ್ದೆಯಲ್ಲಿ ಮುಂದುವರೆಸಬಾರದು” ಎಂದು ಆಗ್ರಹಿಸಿದರು.

“ಜುಲೈ 04ರಂದು ಕೆಲಸ ಮತ್ತು ಕೂಲಿಗಾಗಿ ಕೂಲಿಕಾರರು ತಮ್ಮ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಒಂದು ಮನವಿ ಪತ್ರ ಸ್ವೀಕರಿಸಲು ಸತಾಯಿಸಿ ಮಧ್ಯಾಹ್ನದವರೆಗೆ ಕೂಲಿಕಾರರನ್ನು ಬಿಸಿಲಿನಲ್ಲಿ ಕಾಯಿಸಿದ್ದಾರೆ. ನಂತರ ಪ್ರತಿಭಟನಾ ಸ್ಥಳಕ್ಕೆ ಬರಲು ನಿರಾಕರಿಸಿದ ಸಿಇಒ, ಸಂಘದ ಮುಖಂಡರನ್ನು ಕಾರಿಡಾರ್‌ನಲ್ಲೇ ನಿಲ್ಲಿಸಿಕೊಂಡು ಹಿರಿಯ ಮುಖಂಡರ ಜತೆಗೆ ಏಕವಚನ ಮತ್ತು ಅಹಂಕಾರದಿಂದ ಮಾತನಾಡಿದ ನಂದಿನಿ ಐಎಎಸ್‌ ಅವರ ವರ್ತನೆ ಖಂಡನೀಯ” ಎಂದರು.

Advertisements

“ಪ್ರತಿಭಟನೆ ಸಂದರ್ಭದಲ್ಲಿ ನಡೆದ ಮಾತಿನ ಚಕಮಕಿಯನ್ನು ನೆಪ ಮಾಡಿಕೊಂಡು ಇಂದು ಇಡೀ ಜಿಲ್ಲೆಯ ಪಂಚಾಯಿತಿ ನೌಕರರನ್ನು ಬಲವಂತವಾಗಿ ಮಂಡ್ಯಕ್ಕೆ ಕರೆಸಿಕೊಂಡು ಪ್ರತಿಭಟನೆ ನಡೆಸಿರುವುದು ಅಧಿಕಾರದ ದುರುಪಯೋಗವಾಗಿದೆ. ತಮ್ಮ ಅಧಿಕಾರವನ್ನು ಈ ರೀತಿಯಾಗಿ ಯಾವುದೇ ಅಧಿಕಾರಿ ದುರುಪಯೋಗ ಮಾಡಿಕೊಂಡಿರಲಿಲ್ಲ. ಸಿಇಒ ಅವರಿಗೆ ರಾಜಕಾರಣ ಮಾಡುವ ಇಚ್ಚೆಯಿದ್ದರೆ ಹುದ್ದೆಯನ್ನು ತೊರೆದು ನೇರವಾಗಿ ರಾಜಕಾರಣ ಮಾಡಲಿ, ಅದು ಬಿಟ್ಟು ಹಿಂಬಾಗಿಲ ರಾಜಕಾರಣ ಮತ್ತು ಭವಿಷ್ಯದ ರಾಜಕೀಯ ಮಹತ್ವಾಕಾಂಕ್ಷೆಗೆ ಜಿಲ್ಲೆಯನ್ನು ಬಲಿಕೊಡಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನಲೆ ಎಸ್ ಕೆ ಎಂ ಮತ್ತು ಜೆಸಿಟಿಯು ಪೋಸ್ಟರ್ ಬಿಡುಗಡೆ

“ಇಂತಹ ಜನ ವಿರೋಧಿ, ಅಧಿಕಾರ ದುರುಪಯೋಗದ ಅಧಿಕಾರಿಯನ್ನು ಜಿಲ್ಲೆಯಲ್ಲಿ ಮುಂದುವರೆಸಿದರೆ ಸಿಪಿಐಎಂ ತೀವ್ರವಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X