ಶಿವಮೊಗ್ಗ | ದೆವ್ವ ಬಿಡಿಸುತ್ತೇನೆ ಎಂದು ಮಹಿಳೆಯ ಪ್ರಾಣವನ್ನೇ ತೆಗೆದಳು ; ಮೌಢ್ಯಕ್ಕೆ ಅಮಾಯಕಿ ಬಲಿ

Date:

Advertisements

ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. ‘ದೆವ್ವ ಬಿಡಿಸುವ’ ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ಜಂಬರಘಟ್ಟದಲ್ಲಿ ನಡೆದಿದೆ.

ಶಿವಮೊಗ್ಗ ಗ್ರಾಮಾಂತರದ ಹೊಳೆಹೊನ್ನೂರುನಲ್ಲಿ ಮಹಿಳೆಯೊಬ್ಬರಿಗೆ ಮೈ ಮೇಲೆ ದೆವ್ವ ಬಂದಿದ್ದು, ಅದನ್ನು ಬಿಡಿಸುವುದಾಗಿ ಹೇಳಿ ಮಹಿಳೆಯ ಪ್ರಾಣವನ್ನೇ ತೆಗೆದ ಘಟನೆ ನಡೆದಿದ್ದು, ಈ ಸಂಬಂಧ ಹೊಳೆ ಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

1001862784

ಗೀತಮ್ಮ(55) ಎಂಬ ಮಹಿಳೆಗೆ ಕಳೆದ 15 ದಿನಗಳಿಂದ ಅನಾರೋಗ್ಯವಾಗಿತ್ತು. ಇದನ್ನು ಗಮನಿಸಿದ ಮಗ ಸಂಜಯ್ ತಾಯಿಯನ್ನ ಹಳೆ ಜಂಬರಕಟ್ಟೆಯ ಆಶಾ ಯಾನೆ ಶಾಂತಮ್ಮ (45) ವಯಸ್ಸಿನ ಮಹಿಳೆ ಬಳಿ ಕರೆದುಕೊಂಡು ಹೋಗಿದ್ದಾರೆ. ತಾಯಿಯನ್ನ ಪರಿಶೀಲಿಸಿದ ಆಶಾ ತಾಯಿಗೆ ಆತ್ಮ ಬಂದಿದೆ ಎಂದು ಹೇಳಿದ್ದಾಳೆ.

Advertisements

ಮಾಹಿತಿಯ ಪ್ರಕಾರ, ಶಾಂತಮ್ಮ ಎಂಬ ಮಹಿಳೆ ಗೀತಾಳ ಮೈ ಮೇಲೆ ‘ದೆವ್ವ ಬರುತ್ತದೆ. ಅವಳಿಗೆ ದೆವ್ವ ಹಿಡಿದಿದೆ’ ಎಂಬ ಮೂಢ ನಂಬಿಕೆಯನ್ನು ಹೊಂದಿದ್ದಳು. ಹೀಗಾಗಿ ದೆವ್ವ ಬಿಡಿಸುವ ನಿಟ್ಟಿನಲ್ಲಿ ಹೊಸ ಜಂಬರಘಟ್ಟಕ್ಕೆ ಕರೆದುಕೊಂಡು ಹೋಗಿದ್ದರು. ಆದರೆ ದೆವ್ವ ಬಿಡಿಸುವ ಪ್ರಹಸನದ ವೇಳೆ ಗೀತಾಳಿಗೆ ನಿರಂತರವಾಗಿ ಕೋಲಿನಿಂದ ಹೊಡೆಯಲಾಗಿದೆ. ಗೀತಾ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಆಶಾರಿಗೂ ಕಳೆದ 15 ದಿವಸಗಳಿಂದ ಮೈಮೇಲೆ ದೇವರು ಬರುತ್ತಿದ್ದು, ದೆವ್ವ ಬಿಡಿಸುವ ಮಹಿಳೆ ಎಂದು ಊರಿನಲ್ಲಿ ಕುಖ್ಯಾತಿ ಗಳಿಸಿದ್ದಳು. ಇದರಿಂದ ಈಕೆಯ ಬಳಿ ಗೀತಮ್ಮರನ್ನ ಮಗ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ನಿನ್ನೆ ಗೀತಮ್ಮರ ಮೈಮೇಲೆ ಆತ್ಮ ಬಂದಿದ್ದು ಆಶಾ ಪೂಜೆ ಆರಂಭಿಸೋಣ ಎಂದು ಗೀತಮ್ಮಳನ್ನ ಮೆರವಣಿಗೆಯ ಮೂಲಕ ಊರ ಹೊರಗೆ ಕರೆದುಕೊಂಡು ಬಂದು ಕೋಲಿನಿಂದ ಹೊಡೆಯುವ ಪೂಜೆ ಆರಂಭಿಸಿದ್ದಾರೆ. ಗೀತಮ್ಮ ಈ ಘಟನೆಯಿಂದ ಜರ್ಜರಿತಳಾಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಆಕೆಯ ಶವವನ್ನ ಹೊಳೆಹೊನ್ನೂರು ಸಮುದಾಯ ಭವನದಲ್ಲಿರಿಸಲಾಗಿದೆ. ಗೀತಮ್ಮಳಿಗೆ ಆರೋಪಿ ಶಾಂತಮ್ಮ ಕೋಲಿನಿಂದ ಹೊಡೆಯುವ ದೃಶ್ಯದ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುದ್ದು, ಸೂಕ್ತ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿಬಂದಿದೆ.

ಘಟನೆಯ ಸಂಬಂಧ ದೂರು ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಆಶಾ‌ ಮತ್ತು ಅವರ ಗಂಡನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂತಹ ಅಂಧ ಶ್ರದ್ಧೆಗಿಂತ ವೈದ್ಯಕೀಯ ಚಿಕಿತ್ಸೆ ಮತ್ತು ವೈಜ್ಞಾನಿಕ ದೃಷ್ಟಿಕೋನ ಸಮಾಜ ಬೆಳೆಯಬೇಕು ಎಂಬ ಮಾತು ಜನಜನಿತವಾಗಿ ಕೇಳಿ ಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X