ಕಾಶ್ಮೀರ | ರಜೆ ಮೇಲೆ ಮನೆಗೆ ತೆರಳಿದ್ದ ಯೋಧ ನಾಪತ್ತೆ; ಅಪಹರಣ ಎಂದು ಕುಟುಂಬಸ್ಥರ ಆರೋಪ

Date:

Advertisements

ರಜೆಯ ಮೇಲೆ ಮನೆಗೆ ತೆರಳಿದ್ದ 25 ವರ್ಷದ ಯೋಧರೊಬ್ಬರು ಜಮ್ಮು ಮತ್ತು ಕಾಶ್ಮೀರ ಕುಲ್ಗಾಮ್ ಜಿಲ್ಲೆಯಿಂದ ನಾಪತ್ತೆಯಾಗಿದ್ದಾರೆ. ಆದರೆ ತಮ್ಮ ಪುತ್ರನನ್ನು ಅಪಹರಿಸಲಾಗಿದೆ ಎಂದು ಯೋಧನ ಕುಟುಂಬಸ್ಥರು ಆರೋಪಿಸಿದ್ದಾರೆ.

ಅಚಾತಲ್ ಪ್ರದೇಶದ ನಿವಾಸಿಯಾದ ಜಾವೇದ್ ಅಹ್ಮದ್ ವಾನಿ ಅವರು ಕುಲ್ಗಾಮ್ ಜಿಲ್ಲೆಯ ಲಡಾಖ್ ಪ್ರದೇಶದ ಜಮ್ಮು ಮತ್ತು ಕಾಶ್ಮೀರ ಲೈಟ್ ಇನ್‌ಫೆಂಟ್ರಿ ರೆಜಿಮೆಂಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಈದ್‌ ಹಬ್ಬದ ಪ್ರಯುಕ್ತ ರಜೆಯ ಮೇಲೆ ಮನೆಗೆ ತೆರಳಿದ್ದರು. ಜುಲೈ 29ರ ರಾತ್ರಿ 8 ಗಂಟೆ ಸುಮಾರಿಗೆ ಪಾರನ್‌ಹಾಲ್‌ನಲ್ಲಿ ಜಾವೇದ್ ಅಹ್ಮದ್ ಅವರ ಕಾರು ಪತ್ತೆಯಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಜಾವೇದ್ ಅಹ್ಮದ್ ವಾನಿ ದಿನಸಿ ವಸ್ತುಗಳನ್ನು ಖರೀದಿಸಲು ಚೋವಲ್ಗಾಮ್‌ ಪ್ರದೇಶಕ್ಕೆ ಹೋಗಿದ್ದರು. ಎಷ್ಟು ಹೊತ್ತಾದರೂ ಅವರು ಮನೆಗೆ ವಾಪಸ್‌ ಆಗಿರಲಿಲ್ಲ. ಅವರ ಕುಟುಂಬವು ಜಾವೇದ್‌ ಅವರನ್ನು ಹತ್ತಿರದ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಹುಡುಕಲು ಪ್ರಾರಂಭಿಸಿತ್ತು. ಹುಡುಕಾಟದ ವೇಳೆ ಪರಾನ್ಹಾಲ್ ಗ್ರಾಮದಲ್ಲಿ ಅವರ ಕಾರಿನಲ್ಲಿ ಚಪ್ಪಲಿ ಮತ್ತು ರಕ್ತದ ಕಲೆಗಳು ಪತ್ತೆಯಾಗಿವೆ. ನಾಪತ್ತೆಯಾಗಿರುವ ಯೋಧನ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್‌ನಲ್ಲಿ ನಿಮ್ಮ ಪುತ್ರ ಎಷ್ಟು ರನ್ ಸ್ಕೋರ್‌ ಮಾಡಿದ್ದಾರೆ? ಅಮಿತ್ ಶಾಗೆ ಸ್ಟಾಲಿನ್‌ ಪುತ್ರ ತಿರುಗೇಟು

“ನನ್ನ ಮಗನನ್ನು ಲಡಾಖ್‌ನಲ್ಲಿ ನಿಯೋಜಿಸಲಾಗಿತ್ತು. ಈದ್ ಪ್ರಯುಕ್ತ ಮನೆಗೆ ಬಂದಿದ್ದ ಆತ ನಾಳೆ ಕರ್ತವ್ಯಕ್ಕೆ ಸೇರಬೇಕಿತ್ತು.  ನಿನ್ನೆ ಸಂಜೆ ಮಾರುಕಟ್ಟೆಯಿಂದ ಕೆಲವು ವಸ್ತುಗಳನ್ನು ಖರೀದಿಸಲು ಹೊರಟಿದ್ದ. ಆತನನ್ನು ಕೆಲವರು ತಡೆದು ಅಪಹರಿಸಿದ್ದಾರೆ. ನಾನು ಅವರಿಗೆ ಮನವಿ ಮಾಡುತ್ತೇನೆ, ದಯವಿಟ್ಟು ನನ್ನ ಮಗನನ್ನು ಬಿಡುಗಡೆ ಮಾಡಿ” ಎಂದು ಯೋಧನ ತಾಯಿ ವಿಡಿಯೋ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಹಿಂದೆಯೂ ಈ ಪ್ರದೇಶದಲ್ಲಿ ರಜೆಯ ಮೇಲೆ ಆಗಮಿಸಿದ್ದ ಹಲವಾರು ಸೈನಿಕರನ್ನು ಉಗ್ರರು ಅಪಹರಿಸಿ ಹತ್ಯೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X