ರಾಯಚೂರು | ನರೇಗಾ ಕಾಮಗಾರಿ ವೇಳೆ ಮಹಿಳೆಗೆ ಹಾವು ಕಡಿತ ; ಆಸ್ಪತ್ರೆಗೆ ದಾಖಲು

Date:

Advertisements

ಉದ್ಯೋಗ ಕೆಲಸ ಮಾಡುವ ವೇಳೆ ಹಾವು ಕಚ್ಚಿ ಗಾಯಗೊಂಡ ಘಟನೆ ಸಿಂಧನೂರು ತಾಲ್ಲೂಕಿನ ಗಾಂಧಿನಗರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಆಂಜನೇಮ್ಮ (40) ಎಂದು ಗುರುತಿಸಲಾಗಿದೆ. ಉದ್ಯೋಗ ಖಾತ್ರಿ ಅಡಿಯಲ್ಲಿ ಗಾಂಧಿನಗರ ಕಾಲುವೆಗಳ ಕಾಮಗಾರಿ ಕೆಲಸ ಮಾಡುವ ವೇಳೆ ಹಾವು ಕಚ್ಚಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯರ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಸ್ಥಳೀಯ ದಲಿತ ಸಂಘರ್ಷ ಸಮಿತಿ (ಡಿಜೆ ಸಾಗರ ಬಣ ) ಜಿಲ್ಲಾ ಮುಖಂಡ ಮಂಜುನಾಥ ಗಾಂಧಿನಗರ ಮಾತನಾಡಿ,ನರೇಗಾ ಕೆಲಸ ವೇಳೆ ಸುರಕ್ಷತೆ ಕಿಟ್ ಗಳು ಒದಗಿಸಬೇಕು.ಪಂಚಾಯತ್ ಇಲಾಖೆಯವರು ನಿರ್ಲಕ್ಷತನದಿಂದ ಘಟನೆ ಸಂಭವಸಿದೆ. ಇಂತಹ ಪ್ರಕರಣಗಳು ಹೆಚ್ಚಾದರೂ ಪಂಚಾಯತ್ ಇಲಾಖೆಯವರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾವು ಕಚ್ಚಿದ ಮಹಿಳೆಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಸ್ತೆ ಮಧ್ಯೆ ಕೆಟ್ಟು ನಿಂತ ಬಸ್ ; ವಿದ್ಯಾರ್ಥಿಗಳ ಪರದಾಟ

ಗಾಂಧಿನಗರ ಗ್ರಾಮ ಪಂಚಾಯತ್ ಪಿಡಿಒ ಮಹ್ಮದ ಅನೀಫ್ ಮಾತನಾಡಿ, ಕೆಲಸದ ವೇಳೆ ಆಂಜನೇಮ್ಮ ಅವರಿಗೆ ಹಾವು ಕಚ್ಚಿದೆ. ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸುಧಾರಣೆಯಾಗಿದ್ದಾರೆ ಎಂದು ತಿಳಿಸಿದರು.




Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X