ಉಡುಪಿ | ವರ್ಷಗಳೇ ಕಳೆದರೂ ಕಾಮಗಾರಿ ಮುಗಿಯದ ರಾಷ್ಟ್ರೀಯ ಹೆದ್ದಾರಿ, ರಸ್ತೆಗಿಳಿದ ಸ್ಥಳಿಯರು

Date:

Advertisements

ರಾಷ್ಟ್ರೀಯ ಹೆದ್ದಾರಿ 169ಎ ಮಣಿಪಾಲದಿಂದ ಪರ್ಕಳ ಸಂಪರ್ಕಿಸುವ ನಡುವೆ ಈಶ್ವರನಗರ ಕೆಳಪರ್ಕಳ ಭಾಗದಲ್ಲಿ ಕಾಮಗಾರಿ ಮೊಟಕುಗೊಂಡು ಹಲವು ವರ್ಷಗಳೇ ಕಳೆದಿವೆ. ತಾಂತ್ರಿಕ ಮತ್ತು ಕಾನೂನು ಕಾರಣಗಳಿಂದ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಮರು ಆರಂಭಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯದ ವಿರುದ್ಧ ಜನರು ಆಕ್ರೋಶಿತರಾಗಿದ್ದಾರೆ.

ಈ ನಡುವೆ, ಪರ್ಯಾಯ ರಸ್ತೆಯು ವಾಹನ ಸಂಚರಿಸಲಾಗದಷ್ಟು ಹದಗೆಟ್ಟು ಹೋಗಿದೆ. ಇದರಿಂದ ರೋಸಿ ಹೋಗಿರುವ ಸ್ಥಳೀಯರು, ನಿತ್ಯ ವಾಹನ ಸವಾರರು ಇದೀಗ ಪ್ರತಿಭಟನೆಗೆ ಮುಂದಾಗಿದ್ದಾರೆ. ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸುವ ವಿಚಾರವನ್ನು ಸಂಬಂಧ ಜಿಲ್ಲಾಡಳಿತ, ಅಧಿಕಾರಿಗಳು, ಜನಪ್ರತಿನಿಧಿಗಳು ಗಂಭೀರ ವಾಗಿ ಪರಿಗಣಿಸಿಲ್ಲ ಮತ್ತು ಪರ್ಯಾಯ ರಸ್ತೆಯಲ್ಲಿ ನಿತ್ಯ ಸಂಚಾರ ಸಮಸ್ಯೆಯಾಗುತ್ತಿದ್ದರೂ ನಗರಸಭೆ, ರಾ.ಹೆ. ಪ್ರಾಧಿಕಾರ ಕಣ್ಮುಚ್ಚಿ ಕುಳಿತಿದೆ ಎಂಬ ಆರೋಪ ಸ್ಥಳೀಯವಾಗಿ ಕೇಳಿ ಬರುತ್ತಿದೆ.

1006119316

ಹೆದ್ದಾರಿ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳ್ಳಬೇಕು ಮತ್ತು ಅಲ್ಲಿಯ ವರೆಗೂ ಪರ್ಯಾಯ ರಸ್ತೆಯನ್ನು ಡಾಮರೀಕರಣ ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿ ಮಂಜುನಾಥ ನಗರದ ನಿವಾಸಿಗಳು ಹಾಗೂ ಸ್ಥಳೀಯರು ಸೇರಿ ಪರ್ಕಳದ ನಾರಾಯಣ ಗುರು ಮಂದಿರ ತಿರುವಿನ ಬಳಿ ಮೊದಲ ಹಂತದ ಪ್ರತಿಭಟನೆ ನಡೆಸಿದ್ದಾರೆ.

ಕೆಳ ಪರ್ಕಳದಿಂದ ಪರ್ಕಳದ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ಭೂಸ್ವಾಧೀನ ಪ್ರಕ್ರಿಯೆ ವಿಳಂಬ ಸಹಿತ ಕೆಲವು ತಾಂತ್ರಿಕ ಕಾರಣದಿಂದ ಸ್ಥಗಿತಗೊಂಡಿದೆ. ರಸ್ತೆ ನಿರ್ಮಾಣಕ್ಕಾಗಿ ಸುಮಾರು 2000ಕ್ಕೂ ಅಧಿಕ ಲೋಡ್‌ ಮಣ್ಣನ್ನು ತಗ್ಗು ಪ್ರದೇಶಕ್ಕೆ ತುಂಬಿಸಿ ಸಮತಟ್ಟು ಮಾಡಲಾಗಿದೆ. ಈ ಭಾಗದಲ್ಲಿ ಇದೀಗ ದೊಡ್ಡದೊಡ್ಡ ಗಿಡಮರ ಹಾಗೂ ಪೊದೆ ಬೆಳೆದಿದೆ.
ಮಣಿಪಾಲ, ಉಡುಪಿ ಸಂಪರ್ಕಿಸುವ ಅತಿಮುಖ್ಯ ರಸ್ತೆ ಇದಾಗಿದ್ದರೂ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

1006119314

ಈ ಬಗ್ಗೆ ಸಾಮಾಜಿಕ ಹೋರಾಟಗಾರರಾದ ಡಾ| ಪಿ.ವಿ. ಭಂಡಾರಿ ಪ್ರತಿಕ್ರಿಯಿಸಿದ್ದು ಈಗಾಗಲೇ ಸ್ಥಳಿಯರನ್ನು ಒಳಗಂಡ ಮೊದಲ ಹಂತದ ಪ್ರತಿಭಟನೆ ನಡೆಸಿದ್ದೇವೆ, ಇದಕ್ಕೆ ಸ್ಪಂದನೆ ಸಿಗದೇ ಇದ್ದರೆ ಮುಂದಿನ ಹಂತವಾಗಿ ಕಾಲ್ನಡಿಗೆ, ರಸ್ತೆ ತಡೆ ಇತ್ಯಾದಿಗಳನ್ನು ನಡೆಸಲಿದ್ದೇವೆ. ಹೊಸ ಹೆದ್ದಾರಿ ರಸ್ತೆ ನಿರ್ಮಾಣ ಆಗದೇ ಇರುವುದರಿಂದ ಈ ಹಿಂದೆ ವಾಹನ ಸಂಚಾರ ಮಾಡುತ್ತಿದ್ದ ಹಳೇ ರಸ್ತೆಯಲ್ಲೇ ಈಗಲೂ ವಾಹನಗಳು ಸಂಚರಿಸುತ್ತಿವೆ. ಕೆಳಪರ್ಕಳ ಹಾಗೂ ಪರ್ಕಳದ ಸಮೀಪದಲ್ಲಿ ರಸ್ತೆಯಲ್ಲಿ ದೊಡ್ಡದೊಡ್ಡ ಹೊಂಡ ಎದ್ದಿದೆ. ಡಾಮರು ಹಾಕಿ ಸುಸಜ್ಜಿತ ರಸ್ತೆ ಮಾಡಿಕೊಡುವಂತೆ ಸ್ಥಳೀಯರು ಈ ಹಿಂದೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಸಂಬಂಧಪಟ್ಟ ಯಾರೂ ಕೂಡ ಇದನ್ನು ಈವರೆಗೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಮಳೆಗಾಲ ಆರಂಭವಾಗುತ್ತಿದ್ದಂತೆ ವೆಟ್‌ಮಿಕ್ಸ್‌ ಹಾಕುವ ಪ್ರಸಹನ ಅಷ್ಟೆ ಮಾಡುತ್ತಿದ್ದಾರೆ. ಕರಾವಳಿ ಮಳೆಗೆ ಇಳಿಜಾರು ರಸ್ತೆಯಲ್ಲಿ ವೆಟ್‌ಮಿಕ್ಸ್‌ ಹಾಕಿ ಗುಂಡಿ ಮುಚ್ಚಲು ಸಾಧ್ಯವೇ ಇಲ್ಲ ಎಂಬ ಸತ್ಯ ಅಧಿಕಾರಿಗಳಿಗೆ ಗೊತ್ತಿದ್ದರೂ ಅದನ್ನೇ ಮಾಡುತ್ತಿದ್ದಾರೆ ಎಂದು ಹೇಳಿದರು.

ಪರ್ಕಳ ರಸ್ತೆ ಎಂದರೆ ದಿನನಿತ್ಯದ ಅಪಘದ ವಲಯವಾಗಿ ಮಾರ್ಪಟ್ಟಿದೆ ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ರಸ್ತೆ ವ್ಯವಸ್ಥೆಯನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಕೊಡಬೇಕಾಗಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X