ಇಂಗ್ಲಿಷ್ ಮಾತನಾಡದ ಭಾರತೀಯರನ್ನು ಗಡಿಪಾರು ಮಾಡಿ ಎಂದ ಮಹಿಳೆಗೆ ತಿರುಗೇಟು

Date:

Advertisements

ಇಂಗ್ಲಿಷ್ ಮಾತನಾಡದ ಭಾರತೀಯರನ್ನು ಗಡಿಪಾರು ಮಾಡಿ ಎಂದು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿನಿಯೊಬ್ಬರು ಹಾಕಿರುವ ಪೋಸ್ಟಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಲೂಸಿ ವೈಟ್ ಎಂಬ ಕೇಂಬ್ರಿಡ್ಜ್ ವಿವಿಯ ಹಳೆಯ ವಿದ್ಯಾರ್ಥಿನಿ ಎಕ್ಸ್‌ನಲ್ಲಿ ಪ್ರಕಟಿಸಿರುವ ತಮ್ಮ ಪೋಸ್ಟ್‌ನಲ್ಲಿ, “ಲಂಡನ್ ನಗರದ ಹೀಥ್ರೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಾರೊಬ್ಬರಿಗೂ ಸರಿಯಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ. ವಿಮಾನ ನಿಲ್ದಾಣದಲ್ಲಿ ಕೆಲಸ ನಿರ್ವಹಿಸುವ ಹೆಚ್ಚಿನವರು ಭಾರತೀಯರು ಅಥವಾ ಏಷ್ಯಾ ಮೂಲದವರು. ಇವರು ಇಂಗ್ಲಿಷ್ ಮಾತನಾಡುವುದಿಲ್ಲ, ಇವರನ್ನೆಲ್ಲಾ ಗಡಿಪಾರು ಮಾಡಬೇಕು” ಎಂದು ಬರೆದುಕೊಂಡಿದ್ದಾರೆ. ಲೂಸಿ ವೈಟ್ ಹಾಕಿರುವ ಜನಾಂಗೀಯ ನಿಂದನೆಯ ಈ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾನು ಲಂಡನ್ ನಗರದ ಹೀಥ್ರೂ ವಿಮಾನ ನಿಲ್ದಾಣಕ್ಕೆ ಬಂದಿಳಿದೆ. ಇಲ್ಲಿ ಕೆಲಸ ನಿರ್ವಹಿಸುವ ಹೆಚ್ಚಿನವರು ಒಂದೋ ಭಾರತೀಯರು ಇಲ್ಲವೇ ಏಷ್ಯಾ ಮೂಲದವರು. ಅವರು ಇಂಗ್ಲಿಷ್‌ನಲ್ಲಿ ಮಾತನಾಡುವುದಿಲ್ಲ. ನಾನು ಅವರ ಬಳಿ ಇಂಗ್ಲಿಷ್ ನಲ್ಲಿ ಮಾತನಾಡುವಂತೆ ತಾಕೀತು ಮಾಡಿದೆ. ಅದಕ್ಕೆ ನೀವು ದೊಡ್ಡ ಜನಾಂಗೀಯವಾದಿ ಎಂದು ಹೇಳಿದರು” ಎಂದು ಈ ಮಹಿಳೆಯ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

“ಅವರ ಮಾತಿಗೆ ನಾನು ಸರಿ ಎಂದು ಹೇಳಿದ್ದೇನೆ, ಜನಾಂಗೀಯ ಕಾರ್ಡ್ ಅನ್ನು ಅವರು ಬಳಸುತ್ತಿದ್ದಾರೆ. ಬ್ರಿಟನ್ ಹೀಥ್ರೂ ನಿಲ್ದಾಣದ ಪ್ರಮುಖ ದ್ವಾರದಲ್ಲಿ ಇವರು ಯಾಕೆ ಕೆಲಸ ಮಾಡುತ್ತಿದ್ದಾರೆ, ಇವರನ್ನು ಗಡೀಪಾರು ಮಾಡಿ” ಎಂದಿದ್ದಾರೆ.

“ಹೀಥ್ರೂ ವಿಮಾನ ನಿಲ್ದಾಣದ ಬಗ್ಗೆ ನನಗೆ ಚೆನ್ನಾಗಿ ಅನುಭವವಿದೆ, ಈ ಮಹಿಳೆ ಸುಮ್ಮನೆ ಪ್ರಚಾರಕ್ಕಾಗಿ ಹೀಗೆ ಮಾಡುತ್ತಿದ್ದಾರೆ. ಅಲ್ಲಿ ಎಂತಹ ಕಟ್ಟುನಿಟ್ಟಿನ ತಪಾಸಣೆ ಇರಲಿದೆ ಎನ್ನುವುದು ನನಗೆ ತಿಳಿದಿದೆ. ಎಲ್ಲ ಪ್ರಯಾಣಿಕರಿಗೆ ಉತ್ತಮ ಸೌಕರ್ಯವನ್ನು ಕೊಡಲು ಸಾಧ್ಯವಾದ ಎಲ್ಲ ಪ್ರಯತ್ನವನ್ನು ಅವರು ಮಾಡುತ್ತಾರೆ” ಎಂದು ಈಕೆಯ ಪೋಸ್ಟಿಗೆ, ವ್ಯಕ್ತಿಯೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.

ಲೂಸಿ ವೈಟ್ ಎಕ್ಸ್ ಪೋಸ್ಟಿಗೆ ಪರ ಹಾಗೂ ವಿರೋಧವಾಗಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಪ್ರತಿಕ್ರಿಯೆಗಳು ಬಂದಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X