ರಾಜಸ್ಥಾನ | ಭಾರತೀಯ ವಾಯುಪಡೆಯ ಫೈಟರ್ ಜೆಟ್‌ ವಿಮಾನ ಪತನ; ಇಬ್ಬರು ಪೈಲಟ್‌ಗಳ ಸಾವು

Date:

Advertisements

ರಾಜಸ್ಥಾನದ ಚಿರು ಜಿಲ್ಲೆಯ ಭಾನೊಡಾ ಗ್ರಾಮದ ಬಳಿ ಭಾರತೀಯ ವಾಯು ಪಡೆಯ ಫೈಟರ್‌ ಜೆಟ್‌ ವಿಮಾನ ಪತನವಾಗಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಹೊಲವೊಂದರಲ್ಲಿ ಪೈಲಟ್‌ ಮೃತದೇಹ ಒಳಗೊಂಡು ವಿಮಾನದ ಅವಶೇಷಗಳು ಪತ್ತೆಯಾಗಿವೆ. ಆನಂತರದಲ್ಲಿ ಸೇನೆ ಹಾಗೂ ಸ್ಥಳೀಯ ಆಡಳಿತ ಇಬ್ಬರು ಮೃತಪಟ್ಟಿರುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಮೂಲಗಳ ಪ್ರಕಾರ ಫೈಟರ್‌ ಜಟ್‌ ತರಬೇತಿಯಲ್ಲಿದ್ದಾಗ ಅಪಘಾತ ಸಂಭವಿಸಿದೆ. ವಾಯುಪಡೆಯು ರಾಜಸ್ಥಾನದ ಜೋದ್‌ಪುರ ಹಾಗೂ ಬಿಕನೇರ್‌ ಒಳಗೊಂಡು ಹಲವು ಕಡೆಗಳಲ್ಲಿ ಐಎಎಫ್‌ ನೆಲೆಗಳನ್ನು ಹೊಂದಿ ಕಾರ್ಯನಿರ್ವಹಿಸುತ್ತಿದೆ.

Advertisements

ಘಟನೆಯ ನಂತರ ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು. ಆಕಾಶದಲ್ಲಿ ದೊಡ್ಡ ಶಬ್ದ ಉಂಟಾಗಿ ಆನಂತರದಲ್ಲಿ ಮೈದಾನದಲ್ಲಿ ಬೆಂಕಿ ಮತ್ತು ಹೊಗೆ ಆವರಿಸಿದೆ. ಅಪಘಾತದ ನಂತರ ಹೊಲಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸಲು ಸ್ಥಳೀಯರು ಪ್ರಯತ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಪೊಲೀಸರು ಆಗಿಮಿಸಿದ್ದು, ಸೇನಾ ರಕ್ಷಣಾ ಕಾರ್ಯಾಚರಣಾ ತಂಡ ಶೀಘ್ರದಲ್ಲೇ ಸ್ಥಳಕ್ಕೆ ಆಗಮಿಸಿ ತನಿಖೆಯನ್ನು ಆರಂಭಿಸಲಿದೆ. ಅಪಘಾತಕ್ಕೆ ಕಾರಣವೇನೆಂಬುದು ಕೂಡ ಪತ್ತೆಯಾಗಬೇಕಿದೆ. ಪ್ರಾಥಮಿಕ ತನಿಖೆ ಪೂರ್ಣಗೊಂಡ ನಂತರ ಸೇನೆಯು ಅಧಿಕೃತ ಹೇಳಿಕೆಯನ್ನು ನೀಡಲಿದೆ.

ಮಧ್ಯಾಹ್ನ 1.25ರ ಸಮಯದಲ್ಲಿ ಭಾನೊಡಾ ಗ್ರಾಮದ ಕೃಷಿ ಭೂಮಿಯಲ್ಲಿ ಜೆಟ್‌ ವಿಮಾನ ಪತನವಾಗಿದ್ದು, ಮೃತದೇಹಗಳನ್ನು ಅಪಘಾತದ ಸ್ಥಳದಲ್ಲಿ ಪತ್ತೆಹಚ್ಚಲಾಯಿತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X