ಜೈಪುರ – ಮುಂಬೈ ರೈಲಿನಲ್ಲಿ ಗುಂಡು ಹಾರಿಸಿ ನಾಲ್ವರನ್ನು ಕೊಂದ ಆರ್‌ಪಿಎಫ್‌ ಸಿಬ್ಬಂದಿ

Date:

Advertisements

ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್‌) ಸಿಬ್ಬಂದಿ ಸೋಮವಾರ ಬೆಳಗ್ಗೆ ರೈಲಿನಲ್ಲಿದ್ದ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೈಪುರ – ಮುಂಬೈ ರೈಲಿನ (12956) ಬಿ5 ಎಸಿ ಕೋಚ್‌ನಲ್ಲಿ ಈ ಘಟನೆ ನಡೆದಿದೆ. ಗುಂಡು ಹಾರಿಸಿದ ಕಾನ್‌ಸ್ಟೆಬಲ್‌ ಭಾಯಂದರ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೇತನ್‌ ಸಿಂಗ್‌
ಬಂಧಿತ ಆರೋಪಿ ಚೇತನ್‌ ಸಿಂಗ್‌

ಆರೋಪಿ, ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್ ಸಿಂಗ್, ಬೆಳಗ್ಗೆ 5 ಗಂಟೆಯ ಸುಮಾರಿಗೆ ತನ್ನ ಸ್ವಯಂಚಾಲಿತ ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿದ್ದು, ಮತ್ತೊಬ್ಬ ಆರ್‌ಪಿಎಫ್ ಸಹೋದ್ಯೋಗಿ, ಅವರ ಎಸ್ಕಾರ್ಟ್ ಡ್ಯೂಟಿ ಇನ್ ಚಾರ್ಜ್ ಎಎಸ್‌ಐ ಟಿಕಾ ರಾಮ್ ಮೀನಾ ಹಾಗೂ ರೈಲಿನಲ್ಲಿ ಮುಂಬೈಗೆ ತೆರಳುತ್ತಿದ್ದ ಮೂವರು ಪ್ರಯಾಣಿಕರನ್ನು ಕೊಂದಿದ್ದಾನೆ. ಆರೋಪಿಯನ್ನು ಶಸ್ತಾಸ್ತ್ರ ಸಮೇತ ಬಂಧಿಸಲಾಗಿದೆ ಎಂದು ಜೈಪುರದಿಂದ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ತನ್ನ ಹಿರಿಯ ಅಧಿಕಾರಿಯನ್ನು ಕೊಂದ ನಂತರ, ಕಾನ್‌ಸ್ಟೆಬಲ್‌ ಮತ್ತೊಂದು ಬೋಗಿಗೆ ಹೋಗಿ ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದಿದ್ದಾನೆ.

ಪಾಲ್ಘರ್ ನಿಲ್ದಾಣವನ್ನು ದಾಟಿದ ನಂತರ ಚಲಿಸುತ್ತಿರುವ ರೈಲಿನೊಳಗೆ ಆರ್‌ಪಿಎಫ್ ಕಾನ್‌ಸ್ಟೆಬಲ್‌ ಗುಂಡು ಹಾರಿಸಿ ನಾಲ್ವರನ್ನು ಗುಂಡಿಕ್ಕಿ ಕೊಂದ ನಂತರ ರೈಲಿನ ಚೈನ್ ಎಳೆದು ದಹಿಸರ್ ನಿಲ್ದಾಣದ ಬಳಿ ರೈಲಿನಿಂದ ಜಿಗಿದಿದ್ದಾನೆ ಎಂದು ಪಶ್ಚಿಮ ರೈಲ್ವೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಣಿಪುರ ಹಿಂಸಾಚಾರ ನಿಲ್ಲಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಬೋರಿವಲಿ ನಿಲ್ದಾಣದಲ್ಲಿ ಎಲ್ಲ ನಾಲ್ಕು ಮೃತದೇಹಗಳನ್ನು ರೈಲಿನಿಂದ ಹೊರತೆಗೆಯಲಾಗಿದ್ದು, ಕಾಂದಿವಲಿಯ ಬಾಬಾಸಾಹೇಬ್ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ.

ರೈಲ್ವೆ ಪೊಲೀಸರು ಮತ್ತು ಆರ್ ಪಿಎಫ್ ಅಧಿಕಾರಿಗಳ ಸಹಾಯದಿಂದ ಮೀರಾ ರೋಡ್ ನಲ್ಲಿ ಪೊಲೀಸರು ಚೇತನ್ ಸಿಂಗ್ ನ್ನು ಸೆರೆ ಹಿಡಿದಿದ್ದಾರೆ. ಆರೋಪಿ ಚೇತನ್ ಸಿಂಗ್ ಉತ್ತರಪ್ರದೇಶದ ಹತ್ರಾಸ್ ನಿವಾಸಿಯಾಗಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X