ಚುನಾವಣೆಯಲ್ಲಿ ಸೋತ ನಂತರ ವಿದೇಶದಲ್ಲಿ ನೆಲೆಸಲಿರುವ ಪ್ರಧಾನಿ: ಲಾಲು ಪ್ರಸಾದ್‌ ಯಾದವ್

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ವಿದೇಶದಲ್ಲಿ ನೆಲೆಸಲು ಈಗಲೇ ಯೋಜಿಸುತ್ತಿದ್ದಾರೆ ಎಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಯಾದವ್‌ ಟೀಕಿಸಿದರು.

ಕೆಲವು ದಿನಗಳ ಹಿಂದೆ ಮೋದಿ ಮಾಡಿದ್ದ ‘ಕ್ವಿಟ್ ಇಂಡಿಯಾ’ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಪ್ರಧಾನಿಯವರು ಭಾರತ ತೊರೆಯಲು ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ಇದೇ ಕಾರಣಕ್ಕಾಗಿಯೇ ಅವರು ಪದೇ ಪದೇ ವಿದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ತಾವು ಯಾವ ದೇಶದಲ್ಲಿ ಸುಖವಾಗಿರಬಹುದು, ತಮ್ಮ ಇಷ್ಟದ ಪಿಜ್ಜಾ, ಮೊಮೋಸ್ ಹಾಗೂ ಚೌ ಮೇನ್ ಅನ್ನು ಎಲ್ಲಿ ಆನಂದವಾಗಿ ಸವಿಯಬಹುದು ಎಂಬುದಕ್ಕೆ ಸೂಕ್ತವಾದ ಸ್ಥಳ ಹುಡುಕುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

ಅನಾರೋಗ್ಯದಿಂದ ಬಳಲುತ್ತಿರುವ ಲಾಲು ಪ್ರಸಾದ್‌ ಯಾದವ್‌ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮ್ಮ ಹಿರಿಯ ಪುತ್ರ ಅವರೊಂದಿಗೆ ಬಿಹಾರದ ಸಚಿವ ತೇಜ್ ಪ್ರತಾಪ್ ಯಾದವ್ ಆಯೋಜಿಸಿದ್ದ ಸಮಾರಂಭದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡರು.

Advertisements

ಈ ಸುದ್ದಿ ಓದಿದ್ದೀರಾ? ಮುಂಬೈ | ಐಐಟಿ ಸಂಸ್ಥೆಯ ಕ್ಯಾಂಟೀನ್‌ ಗೋಡೆಗಳ ಮೇಲೆ ‘ಸಸ್ಯಾಹಾರಿಗಳಿಗೆ ಮಾತ್ರ’ ಎಂಬ ಪೋಸ್ಟರ್

ಮುಂದಿನ ತಿಂಗಳು ಮುಂಬೈನಲ್ಲಿ ನಡೆಯಲಿರುವ “ಇಂಡಿಯಾ” ಒಕ್ಕೂಟದ ಮುಂದಿನ ಸಭೆಯಲ್ಲಿ ಪಾಲ್ಗೊಳ್ಳಲು ನಾನು ಎದುರು ನೋಡುತ್ತಿದ್ದೇನೆ ಎಂದು ಲಾಲು ಪ್ರಸಾದ್ ತಿಳಿಸಿದ್ದಾರೆ.

ನರೇಂದ್ರ ಮೋದಿಯವರು ಸಂವಿಧಾನವನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಪಕ್ಷ ಒಗ್ಗಟ್ಟನ್ನು ಉಳಿಸಿಕೊಂಡು ಬಿಜೆಪಿಯನ್ನು ಸೋಲಿಸಬೇಕು. ಪ್ರಧಾನಿಯ ಪ್ರಯತ್ನವನ್ನು ವಿಫಲಗೊಳಿಬೇಕು ಎಂದು ಹೇಳಿದ ಲಾಲು ಪ್ರಸಾದ್‌ ಯಾದವ್‌, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

ವಿಪಕ್ಷಗಳು ಸೇರಿ ರಚಿಸಿಕೊಂಡಿರುವ ಒಕ್ಕೂಟವು ಭ್ರಷ್ಟಾಚಾರ, ಸ್ವಜನಪಕ್ಷಪಾತದ ಮೂಲಕ ರಾಜಕೀಯ ಮಾಡುತ್ತಿದೆ ಎಂದಿದ್ದ ಪ್ರಧಾನಿ ಮೋದಿ, ‘ಇಂಡಿಯಾ’ ಒಕ್ಕೂಟವನ್ನು ಈಸ್ಟ್ ಇಂಡಿಯಾ ಕಂಪನಿ ಹಾಗೂ ಕೆಲವು ನಿಷೇಧಿತ ಸಂಸ್ಥೆಗಳಿಗೆ ಹೋಲಿಸಿ ಟೀಕೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X