ಬೀದರ್‌ | ಕನ್ನಡಕ್ಕೆ ಜಯದೇವಿ ತಾಯಿ ಲಿಗಾಡೆ ಕೊಡುಗೆ ಅನನ್ಯ : ಜಗನ್ನಾಥ ಮೂಲಗೆ

Date:

Advertisements

ಕರ್ನಾಟಕ ಏಕೀಕರಣ ಚಳುವಳಿಗೆ ಮಹತ್ವದ ಕೊಡುಗೆ ನೀಡಿದ ಜಯದೇವಿ ತಾಯಿ ಲಿಗಾಡೆ ಅವರು ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಲವರ್ಧನೆಗೂ ಅಮೋಘ ಕಾಣಿಕೆ ನೀಡಿದ್ದಾರೆ ಎಂದು ಬಸವ ಕೇಂದ್ರದ ತಾಲೂಕು ಅಧ್ಯಕ್ಷ ಜಗನ್ನಾಥ ಮೂಲಗೆ ಅಭಿಪ್ರಾಯಪಟ್ಟರು.

ಔರಾದ್‌ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಗಳವಾರ ಪಟ್ಟಣದ ಕಸ್ತೂರ ಬಾ ಗಾಂಧಿ ವಸತಿ ಶಾಲೆಯಲ್ಲಿ ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಫ.ಗು.ಹಳಕಟ್ಟಿ ಅವರ ಜಯಂತಿ ನಿಮಿತ್ತ ಕನ್ನಡ-ವಚನ ಸಂಸ್ಕೃತಿ ಕುರಿತು ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ʼಲಿಗಾಡೆಯವರು ಸೋಲಾಪುರ ಕರ್ನಾಟಕಕ್ಕೆ ಸೇರಿಸಲು ಎಲ್ಲ ಪ್ರಯತ್ನಗಳು ಮಾಡಿದ್ದು, ಸ್ಥಳೀಯರ ಹಾಗೂ ಜನಪ್ರತಿನಿಧಿಗಳ ಬೆಂಬಲ ನಿರೀಕ್ಷಿತ ಪ್ರಮಾಣದಲ್ಲಿ ದೊರೆಯದ ಹಿನ್ನೆಲೆ ಇಂದು ಅಪ್ಪಟ ಕನ್ನಡ ಪ್ರದೇಶವಾದ ಸೋಲಾಪುರ್ ನೆರೆ ರಾಜ್ಯದಲ್ಲಿದೆ. ಅವರು ಕನ್ನಡ ಮತ್ತು ಮರಾಠಿ ಭಾಷೆಯಲ್ಲಿ ಸಾಹಿತ್ಯ ರಚಿಸಿ ಭಾಷಾ ಸಾಮರಸ್ಯದ ಕೊಂಡಿಯಾಗಿ ಕೆಲಸ ಮಾಡಿದರುʼ ಎಂದರು.

Advertisements

ಕಸಾಪ ಗೌರವ ಕಾರ್ಯದರ್ಶಿ ಜಗನ್ನಾಥ ದೇಶಮುಖ ಮಾತನಾಡಿ, ʼಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯ ಸಂರಕ್ಷರಾಗಿ ಕೆಲಸ ಮಾಡಿದ್ದಾರೆ. ಅವರ ಸರಳ ಬದುಕು ನಮ್ಮೆಲ್ಲರಿಗೂ ಸದಾ ಪ್ರೇರಣೆಯಾಗಲಿದೆ ಎಂದು ನಿದರ್ಶನಗಳ ಮೂಲಕ ವಿವರಿಸಿದರು.

WhatsApp Image 2025 07 09 at 10.00.43 PM

ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾರಂಭವನ್ನು ಹಿರಿಯರಾದ ಸುಭಾಷ್ ಪಾರಾ ಉದ್ಘಾಟಿಸಿದರು.

ಇದನ್ನೂ ಓದಿ : ಬೀದರ್‌ | ʼಈದಿನʼ ಫಲಶೃತಿ : ಹಾಲಹಳ್ಳಿ(ಕೆ) ಪ್ರೌಢ ಶಾಲೆಗೆ ಬಿಇಒ ಭೇಟಿ; ಶಾಲೆ ಸ್ಥಳಾಂತರ

ಪ್ರಮುಖರಾದ ವಿರೇಶ ಅಲಮಾಜೆ, ಸಂದೀಪ ಪಾಟೀಲ್, ಕಾವ್ಯ ಅಲಮಾಜೆ, ಸಂಗೀತಾ ರೆಡ್ಡಿ, ಕಾವೇರಿ ಸ್ವಾಮಿ, ಲತಾದೇವಿ ಕೋಕನೆ, ಡಾ. ಮನ್ಮತ ಡೋಳೆ, ಶಿವರಾಜ ಶಟಕಾರ, ಅಶೋಕರೆಡ್ಡಿ ಪಿಟ್ಲೆ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ...

ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ...

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

Download Eedina App Android / iOS

X