ಯಾದಗಿರಿ | ಸವರ್ಣೀಯರಿಂದ ದಲಿತರ ಮೇಲೆ ದೌರ್ಜನ್ಯ : ಆರು ಜನರ ವಿರುದ್ಧ ದೂರು ದಾಖಲು

Date:

Advertisements

ಸವರ್ಣೀಯ ಮಹಿಳೆಯರು ಜಾತಿ ನಿಂದನೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಟದ ಆರೋಪದ ಮೇಲೆ ಬುಧವಾರ ಶಹಾಪುರ ಪೊಲೀಸ್‌ ಠಾಣೆಯಲ್ಲಿ ದಲಿತ ದೌರ್ಜನ್ಯದ ಅಡಿಯಲ್ಲಿ ಆರು ಜನ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ.

ಶಹಾಪುರ ತಾಲ್ಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ತಿಂಗಳ ಹಿಂದೆ ಗ್ರಾಮದ ದಲಿತರ ಬಡಾವಣೆಗೆ ತೆರಳಲು ಹೊಸ ರಸ್ತೆ ನಿರ್ಮಿಸುವುದನ್ನು ಅದೇ ಗ್ರಾಮದ ಮಹಿಳೆಯರು ಹಾಗೂ ಅಲ್ಲಿನ ನಿವಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ರಸ್ತೆ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.

ಕಳೆದ ಜೂ.21ರಂದು ರಸ್ತೆ ವಿಷಯವಾಗಿ ಮತ್ತೆ ಜಗಳ ನಡೆದಾಗ ಗ್ರಾಮದ ಕುರುಬ ಸಮುದಾಯ ಹಾಗೂ ಇನ್ನಿತರರು ಜಾತಿ ನಿಂದನೆ ಮಾಡಿ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಅದನ್ನು ನೋಡಿ ಗೊತ್ತಾಗಿರುವುದರಿಂದ ತಡವಾಗಿ ಬಂದು ದೂರು ಸಲ್ಲಿಸುತ್ತಿರುವುದಾಗಿ ಗ್ರಾಮದ ದಲಿತ ಮುಖಂಡ ಬಸವರಾಜ ಮರೆಪ್ಪ ನಾಟೇಕಾರ ಅವರು ದೂರಿನಲ್ಲಿ ತಿಳಿಸಿದ್ದಾರೆ.

Advertisements

ವಿಭೂತಿಹಳ್ಳಿ ಗ್ರಾಮದಲ್ಲಿ ಸವರ್ಣೀಯ ಕುರುಬ ಸಮುದಾಯದವರು ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಜೀವ ಬೆದರಿಕೆ ಇದೆ. ತಕ್ಷಣ ಅವರ ವಿರುದ್ಧ ದೂರು ದಾಖಲಿಸಬೇಕು ಹಾಗೂ ಗ್ರಾಮದಲ್ಲಿ ವಾಸಿಸುವ ದಲಿತ ಕುಟುಂಬಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಬುಧವಾರ ಶಹಾಪುರ ಠಾಣೆ ಎದುರು ದಲಿತ ಮುಖಂಡರು ಕೆಲಹೊತ್ತು ಧರಣಿ ನಡೆಸಿದರು.

ಇದನ್ನೂ ಓದಿ : ಬೀದರ್‌ | ʼಈದಿನʼ ಫಲಶೃತಿ : ಹಾಲಹಳ್ಳಿ(ಕೆ) ಪ್ರೌಢ ಶಾಲೆಗೆ ಬಿಇಒ ಭೇಟಿ; ಶಾಲೆ ಸ್ಥಳಾಂತರ

ಈ ವೇಳೆ ದಲಿತ ಹಿರಿಯ ಹೋರಾಟಗಾರರಾದ ಮಲ್ಲಿಕಾರ್ಜುನ ಪೂಜಾರಿ ನಾಗಣ್ಣ ಬಡಿಗೇರ್, ಶಿವಪುತ್ರ ಜವಳಿ, ಶ್ರೀಶೈಲ ಹೊಸಮನಿ, ಶಿವಕುಮಾರ್ ತಳವಾರ್, ಭೀಮರಾಯ ತಳವಾರ್, ಶರಣು ದೋರನಹಳ್ಳಿ, ಅಶೋಕ ಹೊಸಮನಿ, ಹೊನ್ನಪ್ಪ ಗಂಗನಾಳ, ಮರೇಪ್ಪ ಜಾಲಿಬೆಂಚಿ, ಸುಭಾಷ್ ತಳವಾರ್, ಬಸವರಾಜ್ ತಳವಾರ್, ಮಾಳಪ್ಪ ಸಲಾದಪೂರ, ಚಂದ್ರಕಾಂತ ರಸ್ತಾಪೂರ, ನಾಗರಾಜ್ ಬೊಮ್ಮನಹಳ್ಳಿ, ಶಿವು ಪೋತೆ, ಮೌನೇಶ ಜಾರಕಿಹೊಳಿ, ಶರಣು ಬೇವಿನಹಳ್ಳಿ ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Alli sabaranna yaakrnbutte? Obba saabi jaati nindane case anta heliddakke neenu haakikondu sattiddane, avarappa maga satta anta edi hodkondu sattiddane. Sabaru enu andilva?

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X