ಕಲಬುರಗಿ | ರಸ್ತೆ ಕಾಮಗಾರಿಗೆ ಕಮಿಷನ್‌ ಕೇಳಿದ ವಿಡಿಯೊ ವೈರಲ್‌ : ಜೆಇ, ಪಿಡಿಒ ಅಮಾನತು

Date:

Advertisements

15ನೇ ಹಣಕಾಸು ಯೋಜನೆಯ ಕಾಮಗಾರಿ ಕೈಗೊಳ್ಳಲು ಪಿಡಿಒ, ಎಇಇ, ಜೆಇಗಳಿಗೆ ಸಲ್ಲಬೇಕಾದ ಲಂಚದ ಪರ್ಸೆಂಟೇಜ್‌ ಕುರಿತ ವಿಡಿಯೊ ಜಾಲತಾಣದಲ್ಲಿ ಹಂಚಿಕೆಯಾದ ಹಿಂದೆಯೇ ಪಂಚಾಯತ್‌ರಾಜ್ ಎಂಜಿನಿಯರಿಂಗ್‌ನ ಚಿತ್ತಾಪುರ ಉಪ ವಿಭಾಗದ ಕಿರಿಯ ಎಂಜಿನಿಯರ್‌ನನ್ನು (ಜೆಇ) ಬುಧವಾರ ಅಮಾನತು ಮಾಡಲಾಗಿದೆ.

ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ಮೇರೆಗೆ ಚಿತ್ತಾಪುರದ ಕಿರಿಯ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಶ್ರೀಪಾದ ಬಾಪುರಾವ ಕುಲಕರ್ಣಿ ಅಮಾನತುಗೊಂಡವರು.

ಸಿಸಿ ರೋಡ್ ವಿಚಾರವಾಗಿ ಅಧಿಕಾರಿಗಳು ಕಮೀಷನ್‌ಗೆ ಬೇಡಿಕೆಯಿಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ನಂಗೆ 5 ಪರ್ಸೆಂಟ್ ಪಿಡಿಓಗೆ 3 ಪರ್ಸೆಂಟ್ ಎಇಇಗೆ 5 ಪರ್ಸೆಂಟ್ ಕಮಿಷನ್ ಕೊಡಬೇಕು ಎಂದು ಜೆಇ ಶ್ರೀಪಾದ ಹೇಳಿರುವುದು ಕಂಡು ಬಂದಿದೆ.

Advertisements

ಇದನ್ನೂ ಓದಿ : ಯಾದಗಿರಿ | ಸವರ್ಣೀಯರಿಂದ ದಲಿತರ ಮೇಲೆ ದೌರ್ಜನ್ಯ : ಆರು ಜನರ ವಿರುದ್ಧ ದೂರು ದಾಖಲು

ಕರ್ತವ್ಯ ನಿರ್ಲಕ್ಷ್ಯ, ಬೇಜವಾಬ್ದಾರಿ ತೋರಿದ್ದು ಕಂಡು ಬಂದ ಹಿನ್ನೆಲೆ ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X