ಉತ್ತರ ಕನ್ನಡ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೃಷಿ ಕೂಲಿ ಕಾರ್ಮಿಕರ ಸಂಘ ಪ್ರತಿಭಟನೆ

Date:

Advertisements

ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಷರ ದಾಸೋಹ ನೌಕರರು ಸೇರಿ ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಮೆರವಣಿಗೆ ಮುಖಾಂತರ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

  • ಕೃಷಿ ಕೂಲಿಕಾರರಿಗೆ ಪ್ರಸ್ತುತ ದಿನಗೂಲಿ ₹370 ಸಾಕಾಗುತ್ತಿಲ್ಲ. ಕನಿಷ್ಠ ₹600 ದಿನಗೂಲಿಯನ್ನು ನಿಗದಿಪಡಿಸಬೇಕು.
  • ಪ್ರಸ್ತುತ ವರ್ಷದ ಉದ್ಯೋಗದಲ್ಲಿ ಕೇವಲ 100 ಹಾಜರಿಗಳನ್ನು ಮಾತ್ರ ನೀಡಲಾಗುತ್ತಿದೆ. ಇದನ್ನು 200 ಹಾಜರಿಗಳವರೆಗೆ ಹೆಚ್ಚಿಸಬೇಕು.
  • ಮಾಡಿದ ಕೆಲಸಕ್ಕೆ 15 ದಿನಗಳೊಳಗೆ ಕೂಲಿ ಪಾವತಿ ಮಾಡಬೇಕು.
  • ನಗದಿಲ್ಲದೇ ರೈತರಿಗೆ ತಲೆಮಾರು ಪಟ್ಟಿ ವಿತರಣೆ ಮಾಡಬೇಕು.
  • ಅರಣ್ಯ ಹಕ್ಕುಪತ್ರಗಳನ್ನು ಎಲ್ಲ ಅರ್ಹ ಕುಟುಂಬಗಳಿಗೆ ನೀಡಬೇಕು.
  • PWD ಇಲಾಖೆಗೆ ಸಂಬಂಧಪಟ್ಟ ರಸ್ತೆಗಳು ಮಳೆ ಕಾರಣದಿಂದ ಹಾನಿಗೊಳಗಾಗಿವೆ. ಕೂಡಲೇ ದುರಸ್ತಿ ಕಾರ್ಯ ನಡೆಯಬೇಕು.
  • ಮನೆ ಜಾಗದ ದಾಖಲೆಗಳ ಸಮಸ್ಯೆಗಳನ್ನು ಪರಿಹರಿಸಬೇಕು. ದಾಖಲೆ ಇಲ್ಲದವರಿಗೆ ಸೂಕ್ತ ದಾಖಲೆಗಳನ್ನು ಒದಗಿಸೇಕು.
    ಎಂದು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
WhatsApp Image 2025 07 09 at 4.21.12 PM

ಇದನ್ನೂ ಓದಿ: ಉತ್ತರ ಕನ್ನಡ | ನಗರಸಭೆ ಅಧಿಕಾರಿಗಳಿಂದಲೇ ನೀರಿನ ಪೈಪ್ ಕಳ್ಳತನ

ಪ್ರತಿಭಟನೆಯಲ್ಲಿ ತಾಲೂಕಾಧ್ಯಕ್ಷ ಭೀಮಣ್ಣ ಬೋವಿ, ಕಾರ್ಯದರ್ಶಿ ಭೂತೇಷ ಚಿತ್ರಗಾರ, ಸಾಯಿನಾಥ್ ಕಲ್ಲಹಕ್ಲ, ಮಾಂತೇಶ ಮಾಳಗಿ, ಶಿವಪ್ಪ ಹರಿಜನ (ಪಾಳಾ), ನೀಲವ್ವ ಸುರೇಶ್ ಬೋವಿ, ಸಾವಿತ್ರೀ ಉಗ್ಗಿನಕೇರಿ, ಸಾವಿತ್ರೀ ಕಲಕೇರಿ, ಗೋಪಾಲ್ ಅಕ್ಕಸಾಲಿ, ಕಲಾವತಿ ಕಲಕೇರಿ ಮತ್ತು ಧರ್ಮಾವತಿ ಮಜ್ಜಿಗೇರಿ ಭಾಗವಹಿಸಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X