ಬಿಹಾರ | ಯುವತಿಯ ‘ವೋಟರ್​ ಐಡಿ’ಯಲ್ಲಿ ಸಿಎಂ ನಿತೀಶ್ ಕುಮಾರ್ ಫೋಟೊ; ಆಯೋಗದ ಯಡವಟ್ಟು

Date:

Advertisements

ಯುವತಿಯೊಬ್ಬರ ಮತದಾರ ಗುರುತಿನ ಚೀಟಿಯಲ್ಲಿ (ವೋಟರ್ ಐಡಿ) ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಿತ್ರವನ್ನು ಚುನಾವಣಾ ಆಯೋಗವು ಮುದ್ರಿಸಿರುವ ಘಟನೆ ಬೆಳಕಿಗೆ ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್) ಕ್ರಮದ ವಿರುದ್ಧ ರಾಜ್ಯದ ಜನರ ಆಕ್ರೋಶಗೊಂಡಿರುವ ಸಮಯದಲ್ಲೇ ಆಯೋಗದ ಯಡವಟ್ಟು ಬೆಳಕಿಗೆ ಬಂದಿದೆ. ಮತದಾರರು ಆಯೋಗವನ್ನು ತರಾಟೆಗೆ ತೆಗೆದುಕೊಂಡಿದೆ.

ಬಿಹಾರದ ಮಾಧೇಪುರದಲ್ಲಿ 29 ವರ್ಷದ ಯುವತಿಯೊಬ್ಬರ ಗುರುತಿನ ಚೀಟಿಯಲ್ಲಿ ಯುವತಿಯ ಫೋಟೋ ಬದಲಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಿತ್ರವನ್ನು ಮುದ್ರಿಸಲಾಗಿದೆ. ಇದು ವ್ಯವಸ್ಥೆಯ ನಿರ್ಲಕ್ಷ್ಯ ಮತ್ತು ಚುನಾವಣಾ ಆಯೋಗದ ವೈಫಲ್ಯ ಎಂದು ಯುವತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಆಗ್ರಹಿಸಿದ್ದಾರೆ.

ಮಾಧೇಪುರದ ಅಭಿಲಾಷ ಕುಮಾರಿ ಎಂಬವರಿಗೆ ಮತದಾರ ಗುರುತಿನ ಚೀಟಿಯು ಅಂಚೆ ಮೂಲಕ ಬಂದಿತ್ತು. ಅದನ್ನು ತೆಗೆದು ನೋಡಿದಾಗ, ಅದರಲ್ಲಿ, ತಮ್ಮ ಚಿತ್ರದ ಬದಲಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಿತ್ರ ಕಂಡುಬಂದಿದೆ. ಅದನ್ನು ನೋಡಿ, ಯುವತಿ ವಿಚಲಿತರಾಗಿದ್ದಾರೆ.

Advertisements

ಈ ಲೇಖನ ಓದಿದ್ದೀರಾ?: ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಪೌರತ್ವ ಸಾಬೀತಿಗೆ ಜನರ ಪರದಾಟ; ಮತದಾನದ ಹಕ್ಕನ್ನೇ ಕಳೆದುಕೊಳ್ಳುವರೇ 50% ಜನರು?

ಬಳಿಕ, ಅಭಿಲಾಷ ಅವರು ಚುನಾವಣಾ ಆಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಅಲ್ಲದೆ, ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಹೊಣೆಗಾರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಉಪ ಚುನಾವಣಾ ಅಧಿಕಾರಿ ಜೀತೇಂದ್ರ ಕುಮಾರ್, “ಬಿಹಾರದ ಮತದಾರರ ಚೀಟಿಗಳು ಕರ್ನಾಟಕದಲ್ಲಿ ತಯಾರಾಗಿವೆ. ಗುರುತಿನ ಚೀಟಿಗಳ ತಯಾರಿ ವೇಳೆ ತಪ್ಪುಗಳಾಗಿದ್ದರೆ, ಅವುಗಳನ್ನು ಸರಿಪಡಿಸುತ್ತೇವೆ. ಮತದಾರರ ಚೀಟಿಯಲ್ಲಿ ಯಾವುದೇ ತಪ್ಪುಗಳ ಕಂಡಬಂದರೂ, ತಿದ್ದುಪಡಿಗಾಗಿ ಆಯೋಗಕ್ಕೆ ಆನ್‌ಲೈನ್ ಮತ್ತು ಆಫ್‌ನಲ್ಲಿ ಅರ್ಜಿ ಸಲ್ಲಿಸಬಹುದು. ತಪ್ಪುಗಳನ್ನು ತಿದ್ದಲಾಗುತ್ತದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X