ಶಿವಮೊಗ್ಗ | ರಾಗಿಗುಡ್ಡದಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಿಸಿ ; ಕ್ರಮ ಜರುಗಿಸಿ : ಕಿರಣ್ ಕರವೇ ಸ್ವಾಭಿಮಾನಿ ಬಣ

Date:

Advertisements

ಶಿವಮೊಗ್ಗ ಅಕ್ರಮ ಮಧ್ಯ ಮಾರಾಟದ ವಿರುದ್ಧ ಕರವೇ ಸ್ವಾಭಿಮಾನಿ ಬಣದಿಂದ ಅಬಕಾರಿ ಉಪ ಆಯುಕ್ತರು ರವರಿಗೆ ಮನವಿ ನೀಡಿದ್ದಾರೆ.

ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಮಧ್ಯಮ ಬಡ ಕೂಲಿ ಕಾರ್ಮಿಕ ಅತಿ ಹೆಚ್ಚು ವಾಸವಿರುವ ಪ್ರದೇಶವಾಗಿದ್ದು ಇಲ್ಲಿ ಯಾವಾಗಲೂ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಪುಂಡರ ಹಾವಳಿ, ಕಳ್ಳತನ ಗಲಾಟೆ ಯಾವಾಗಲೂ ನಡೆಯುತ್ತಿರುತ್ತದೆ ಇದಕ್ಕೆ ಮೂಲ ಕಾರಣವೇ ಏನೆಂದರೆ ಈ ಪ್ರದೇಶದಲ್ಲಿ ಎಗ್ಗಿಲ್ಲದೆ ರಾಜಾ ರೋಷವಾಗಿ ದಿನದ 24 ಗಂಟೆಗಳ ಕಾಲ ಅಕ್ರಮವಾಗಿ ಮತ್ತು ಅನಧಿಕೃತವಾಗಿ ಮನೆ ಅಂಗಡಿಗಳಲ್ಲಿ ಮದ್ಯವನ್ನು ಮಾರಾಟ ಮಾಡುತ್ತಿರುತ್ತಾರೆ ಎಂದಿರುತ್ತಾರೆ.

ಮದ್ಯ ಕುಡಿದ ಪುಂಡರು ಅನಾವಶ್ಯಕವಾಗಿ ಇಲ್ಲಿ ದೊಂಬಿ ಕಳ್ಳತನ ಸಹಜವಾಗಿರುತ್ತದೆ ಎಂದರು.

ಈ ಬಗ್ಗೆ ನಮ್ಮ ಸಂಘಟನೆ ಹಿಂದೆ ಅಕ್ರಮವಾಗಿ ಮಧ್ಯವನ್ನು ಮಾರಾಟ ಮಾಡುವವರ ವಿರುದ್ಧ ಸಂಬಂಧಪಟ್ಟ ಇಲಾಖೆಗೆ ದೂರನ್ನು ನೀಡಿದ್ದರು ಸಹ ಯಾವ ಅಧಿಕಾರಿಗಳು ಅಥವಾ ಅಬಕಾರಿ ಇಲಾಖೆಯ ಅಧಿಕಾರಿಗಳು ಅನಧಿಕೃತ ಮಾರಾಟಗಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡಿರುವುದಿಲ್ಲ ಎಂದು ಆರೋಪಿಸಿದ್ದಾರೆ.

ಈ ಮಾರಾಟಗಾರರ ಜೊತೆಗೆ ಅಧಿಕಾರಿಗಳು ಶಾಮಿಲಾಗಿದ್ದಾರ ಎಂಬ ಅನುಮಾನವೂ ಮೂಡುತ್ತದೆ.

ರಾಗಿಗುಡ್ಡದಲ್ಲಿ ಆಗಿರುವ ಕೆಲ ಅನಾಹುತಗಳಿಗೆ ಈ ಅಕ್ರಮ ಮಧ್ಯದ ಮಾರಾಟವೇ ಕಾರಣ ಈಗಲಾದರೂ ನಿಷ್ಠಾವಂತ ಪೊಲೀಸ್ ಅಧಿಕಾರಿಗಳು ಈ ಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಿ ಈ ಅಕ್ರಮ ಮಾರಾಟವನ್ನು ನಿಲ್ಲಿಸಿ ಹಾಗೂ ಎಲ್ಲಿ ಗೂಡಂಗಡಿ ಮನೆಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೋ ಅಂತವರನ್ನು ಪತ್ತೆ ಹಚ್ಚಿ ಅಬಕಾರಿ ಇಲಾಖೆಯವರು ಕೂಡಲೇ ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಸಂಘಟನೆ ಅಗ್ರಹಿಸುತ್ತದೆ ಎಂದಿದ್ದಾರೆ.

ಇಲ್ಲದಿದ್ದಲ್ಲಿ ಈ ಬಗ್ಗೆ ಸಂಘಟನೆ ವಿಭಿನ್ನ ರೀತಿಯ ಪ್ರತಿಭಟನೆಯನ್ನು ಕೇವಲ 15 ದಿನದ ಒಳಗಾಗಿ ಹಮ್ಮಿಕೊಳ್ಳುವುದು ಎಚ್ಚರಿಸುತ್ತದೆ ಎಂದಿರುತ್ತಾರೆ.

ಈ ಪ್ರತಿಭಟನೆಯಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ಸಿ ನಗರ ಅಧ್ಯಕ್ಷರಾದ ಜೀವನ ಡಿ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಾಲತೇಶ್. ಸತೀಶ್ ಸಂಘಟನೆ ಮುಖಂಡರಾದ ಸಾಧಿಕ್ ಸತೀಶ್ ಸಾಧಿಕ್ ಪುರ್ಲೆ ಆರತಿ ಕನ್ನಡಪರ ಹೋರಾಟಗಾರರಾದ ಸಂತೋಷ್ ದೇವೇಂದ್ರಪ್ಪ ರಾಮು ಜಾದವ್ ಮಹಮ್ಮದ್ ಆಲಿ ರವಿಕುಮಾರ್ ಶಿವಕುಮಾರ್ ಸುರೇಶ್ ಪರಮೇಶ್ ರಾಮು ರಾಗಿಗುಡ್ಡ ಮುಂತಾದ ಪದಾಧಿಕಾರಿಗಳು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X