ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಪ್ರತಿಭಟನೆ

Date:

Advertisements

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಮಾತೆ ಇಸ್ಲಾಮಿ ಹಿಂದ್ ಸಿಂಧನೂರು ಘಟಕ, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ನೇತೃತ್ವದಲ್ಲಿ ಸಿಂಧನೂರು ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಪಟೇಲ್ ವಾಡಿಯ ಮಸ್ಜಿದ್ ಎ ಹುದಾ ದಿಂದ ಕನಕದಾಸ ವೃತ್ತದ ಮಾರ್ಗವಾಗಿ ತಹಶೀಲ್ದಾರ್ ಕಚೇರಿವರೆಗೆ ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆ ನಡೆಸಿ ತಹಶೀಲ್ದಾರ ಮೂಲಕ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ವಕ್ಫ್ ಆಸ್ತಿಗಳ ಸಮುದಾಯದ ಮೇಲ್ವಿಚಾರಣೆಯನ್ನು ಕಿತ್ತುಹಾಕುವುದು. ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರ ಸೇರ್ಪಡೆ ಮಾಡಿ ಇತರ ನಂಬಿಕೆ ಆಧಾರಿತ ಸಂಸ್ಥೆಗಳ ಆಡಳಿತದಲ್ಲಿ ಪ್ರತಿಬಿಂಬಿಸದ ಹೇರಿಕೆಯಾದ ಮುಸ್ಲಿಂ ಸಂಸ್ಥೆಗಳ ಧಾರ್ಮಿಕ ಸ್ವಾಯತ್ತತೆಯನ್ನು ದುರ್ಬಲಗೊಳಿಸು ಹುನ್ನಾರ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

1000149267



ಭಾರತದ ಸಂವಿಧಾನದ 14, 25, 26 ಮತ್ತು 29 ನೇ ವಿಧಿಗಳ ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ವಕ್ಫ್‌ನಿಂದ ಹಣಕಾಸು ನೆರವು ಪಡೆಯುತ್ತಿರುವ ಮಸೀದಿಗಳು, ಮದರಸಾಗಳು, ಅನಾಥಾಶ್ರಮಗಳು, ಆಸ್ಪತ್ರೆಗಳು ಮತ್ತು ಇತರ ಅಗತ್ಯ ಸಂಸ್ಥೆಗಳ ರಕ್ಷಣೆಯನ್ನು ದುರ್ಬಲಗೊಳಿಸುತ್ತದೆ. ಜಿಲ್ಲಾ ವಕ್ಫ್ ಅಧಿಕಾರಿಯು ಪ್ರದೇಶದಲ್ಲಿ ದಾಖಲಾಗದ ವಕ್ಫ್ ಆಸ್ತಿಗಳ ಪರಿಶೀಲನೆ ಮತ್ತು ಸರಿಯಾದ ನೋಂದಣಿಯನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾರ್ಮಿಕ ವಿರೋಧಿ ಸಂಹಿತೆ ರದ್ದತಿಗೆ ಜಂಟಿ ಸಂಘಟನೆಗಳ ಆಗ್ರಹ

Advertisements

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ (ಜಿಐಒ) ಸಿಂಧನೂರು ಘಟಕದ ಅಧ್ಯಕ್ಷೆ ಉಮ್ಮೆಕುಲ್ಸುಂ, ಶಹನಾಜ್ ಬೇಗಂ, ಸೈಯದಾ ಬೇಗಂ, ಖಮರ್ ಸುಲ್ತಾನ, ಅತಿಯಾ ಫೌಝಿಯಾ, ರಿಜ್ವಾನ ಬೇಗಂ, ಲುಬ್ನಾ ಬೆಳಗಾಮಿ, ಅರ್ಶಿಯಾ ಮತೀನ, ತಹೆಸೀನ್ ಪರ್ವಿನ್, ಅಸ್ಮಾ ಖಾನಂ, ಶಾಜಿಯಾ, ಜಮಾತೆ ಇಸ್ಲಾಂ ಹಿಂದ್ ಸಿಂಧನೂರು ತಾಲೂಕು ಘಟಕದ ಅಧ್ಯಕ್ಷ ಮುಹಮ್ಮದ್ ಹುಸೇನ್, ಶರ್ಫುದ್ದೀನ ಸಾಬ, ದಿಲಾವರ್ ಅಂಬರ್ ಖಾನ್, ಮಹೆಬೂಬ ಖಾನ್, ವಸಿಂ, ಇಮ್ತಿಯಾಜ್ ಸೇರಿದಂತೆ ಮಹಿಳೆಯರು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

1000149270
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಸಿಂಧನೂರು ಅಧ್ಯಕ್ಷರು ನೇಹಾ ಸಮ್ರೀನ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X