ವಸತಿ ಶಾಲೆಗೆ ದಾಖಲಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮುಧೋಳದಲ್ಲಿ ಗುರುವಾರ ನಡೆದಿದೆ.
ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಮೃತ ವಿದ್ಯಾರ್ಥಿ.
ವಸತಿ ಶಾಲೆಗೆ ಸೇರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಾಲಕ ನಾರಾಯಣ ರಾಠೋಡ್ ಹೇಳಿದ್ದನು ಎಂದು ಹೇಳಲಾಗಿದೆ. ಈ ವೇಳೆ ಪೋಷಕರು ನಾರಾಯಣ ರಾಥೋಡ್ನನ್ನು ಮನವೊಲಿಸಿ ಮುಧೋಳದ ಇಂದಿರಾ ಗಾಂಧಿ ವಸತಿ ಶಾಲೆಗೆ ದಾಖಲು ಮಾಡಿದ್ದರು.
ವಿದ್ಯಾರ್ಥಿ ನಾರಾಯಣ ತಾಯಿಯನ್ನು ಬಿಟ್ಟಿರಲಾರದೆ ಆತ್ನಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿ ನಾರಾಯಣ 15 ದಿನಗಳ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದನು ಎಂದು ತಿಳಿದು ಬಂದಿದೆ.
ಈ ಕುರಿತು ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.