ತುಮಕೂರು | ಔಟರ್ ರಿಂಗ್ ರಸ್ತೆಗೆ ರೈತರ ವಿರೋಧ : ಪ್ರತಿಭಟನೆ

Date:

Advertisements

ತುಮಕೂರು ಔಟರ್ ರಿಂಗ್ ರಸ್ತೆ ನಿರ್ಮಾಣಕ್ಕೆ ರೈತರ ವಿರೋಧ ವ್ಯಕ್ತವಾಗಿದೆ. ಪೊಲೀಸ್ ಭದ್ರತೆಯಲ್ಲಿ ಸರ್ವೆಗೆ ಬಂದ ಅಧಿಕಾರಿಗಳು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದಿದೆ. ನಾವು ಯಾವುದೇ ಕಾರಣಕ್ಕೂ ಸರ್ವೆ ಮಾಡಲು ಬಿಡಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.

ನೂರಾರು ರೈತರಿಂದ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ತುಮಕೂರು ತಾಲೂಕಿನ ಭೈರಸಂದ್ರ ಗ್ರಾಮದಲ್ಲಿ ನಡೆದಿದೆ. ತುಮಕೂರು ಹೊರವಲಯದ ನಂದಿಹಳ್ಳಿಯಿಂದ ಮಲ್ಲಸಂದ್ರವರೆಗೆ ಅನುಮೋದನೆಯಾಗಿರೋ ಔಟರ್ ರಿಂಗ್ ರಸ್ತೆ ಒಟ್ಟು 44 ಕಿಲೋಮೀಟರ್ ಉದ್ದ ರಸ್ತೆಯಾಗಿದೆ. ಸುಮಾರು 24 ಹಳ್ಳಿಗಳ ಮೇಲೆ ಹಾದುಹೋಗುವ ರಸ್ತೆಯಾಗಿದೆ.

1001713807

ಈಗಾಗಲೇ ಕೆಲವು ಗ್ರಾಮದಲ್ಲಿ ಸರ್ವೆ ನಡೆಸಿ ಅಧಿಕಾರಿಗಳು ಅಳತೆ ಕಲ್ಲು ಹಾಕಿದ್ದಾ.  ಬೈರಸಂದ್ರ ಗ್ರಾಮದಲ್ಲಿ ಅಳತೆ ಕಲ್ಲು ಹಾಕಲು ಬಂದಾಗ  ರೈತರ ವಿರೋಧ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳನ್ನು ತಡೆದು ಪ್ರತಿಭಟಿಸಿದ್ದಾರೆ. ಕಾನೂನು ರೀತಿ ಅಳತೆ ಮಾಡಿ ಕಲ್ಲು ನಡೆತ್ತೇವೆ ಎಂದು ಅಧಿಕಾರಿಗಳು ಪಟ್ಟು ಹಿಡಿದರು. ಅಧಿಕಾರಿಗಳ ಬಳಿ ಕಾಲಾವಕಾಶಕೊಡಿ ಮಾತನಾಡ್ತೀವಿ ಎಂದು ರೈತರ ಒತ್ತಾಯಿಸಿದರು.

Advertisements

ನಕಾಶೆಯಲ್ಲಿರುವ 100 ಅಡಿ ರಸ್ತೆನ್ನೇ  ಅಭಿವೃದ್ಧಿ ಪಡಿಸಿ ಎಂದು ರೈತರು ಒತ್ತಾಯಿಸಿದ್ದಾರೆ. ಗುಬ್ಬಿಯಿಂದ ದಾಬಸ್ ಪೇಟೆವರೆಗೂ ಈಗಾಗಲೇ ನಕಾಶೆಯಲ್ಲಿರುವ ರಸ್ತೆಯನ್ನೇ ಅಭಿವೃದ್ಧಿ ಪಡಿಸಬೇಕು. ಅದರೆ ಖಾಸಗಿಯವರಿಗೆ ಅನುಕೂಲ ಮಾಡಲು ಈ ರಸ್ತೆ ನಿರ್ಮಾಣ ಮಾಡ್ತಿದ್ದಾರೆ ಎಂದು ರೈತರು ಆರೋಪಿಸಿದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X