27 ವರ್ಷ ಹಿಂದಿನ ಸರಣಿ ಬಾಂಬ್​ ಸ್ಫೋಟದ ಪ್ರಮುಖ ಆರೋಪಿ ಕರ್ನಾಟಕದಲ್ಲಿ ಬಂಧನ

Date:

Advertisements

ತಮಿಳುನಾಡಿನ ಕೊಯಮತ್ತೂರಿನ ಸರಣಿ ಬಾಂಬ್​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ 27 ವರ್ಷಗಳ ನಂತರ ಕರ್ನಾಟಕದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

1998ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಸರಣಿ ಬಾಂಬ್​ ಸ್ಫೋಟ ಪ್ರಕರಣ ನಡೆದಿದ್ದು, ಆರೋಪಿ ಸಿದ್ದಿಕಿ ರಾಜ್​​ ಕಳೆದ 27 ವರ್ಷಗಳಿಂದ ಬೇರೆ ಬೇರೆ ಸ್ಥಳಗಳಲ್ಲಿ ತಲೆಮರೆಸಿಕೊಂಡಿದ್ದನು.

ವಿಜಯಪುರ ನಗರದಲ್ಲಿ 12 ವರ್ಷಗಲಿಂದ ತರಕಾರಿ ಮಾರಾಟ ಮಾಡುತ್ತ ಜೀವನ ನಡೆಸುತ್ತಿದ್ದನು. ಈತನಿಗಾಗಿ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಆರೋಪಿ ಸಿದ್ದಿಕಿ ರಾಜ್​ ವಿಜಯಪುರದಲ್ಲಿ ಅಡಗಿರುವುದು ಗೊತ್ತಾಗಿದೆ. ಕೂಡಲೇ ವಿಜಯಪುರಕ್ಕೆ ಬಂದ ಪೊಲೀಸರು, ಆರೋಪಿ ಸಿದ್ದಿಕಿ ರಾಜ್​ನನ್ನು ಪತ್ತೆ ಮಾಡಿ, ಬಂಧಿಸಿ ಕರೆದುಕೊಂಡು ಹೋಗಿದ್ದಾರೆ.

Advertisements

ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವನಾದ ಸಿದ್ದಿಕಿ ರಾಜ್​ ​ಹುಬ್ಬಳ್ಳಿ ಮೂಲದ ಮಹಿಳೆಯೊಂದಿಗೆ ವಿವಾಹವಾಗಿದ್ದಾನೆ. ಸರಣಿ ಸ್ಫೋಟ ಬಳಿಕ ತಲೆಮರೆಸಿಕೊಂಡಿದ್ದ. ಸಿದ್ದಿಕಿ ರಾಜ್​ ಕೊಯಮತ್ತೂರು ಸರಣಿ ಬಾಂಬ್​ ಸ್ಫೋಟ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದಾನೆ. ಬಂಧಿತ ಆರೋಪಿ ವಿರುದ್ಧ ಕೋಮು ಗಲಭೆ, ಹತ್ಯೆಗೆ ಸಂಬಂಧಿಸಿದ ಹಲವು ಪ್ರಕರಣಗಳಿವೆ.

1998ರ ಫೆಬ್ರವರಿ 14 ರಂದು ಕೊಯಮತ್ತೂರಿನಲ್ಲಿ ಸರಣಿ ಬಾಂಬ್​ ಸ್ಫೋಟ ನಡೆದಿದ್ದವು. ಸ್ಫೋಟದಲ್ಲಿ 59 ಜನರು ಮೃತಪಟ್ಟಿದ್ದು, ಸುಮಾರು 231 ಜನರು ಗಾಯಗೊಂಡಿದ್ದರು. ಬಿಜೆಪಿಯ ಹಿರಿಯ ಮುಖಂಡ ಎಲ್​.ಕೆ. ಅಡ್ವಾಣಿ ಅವರನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು ಎನ್ನುವ ಆರೋಪ ಸಹ ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

Download Eedina App Android / iOS

X