ಬೆಂಗಳೂರು | ‘ಅಮೃತಧಾರೆ’ ಧಾರಾವಾಹಿ ನಟಿಗೆ ಪತಿಯಿಂದ ಚಾಕು ಇರಿತ

Date:

Advertisements

ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿರುವ ‘ಅಮೃತಧಾರೆ’ ಧಾರಾವಾಹಿ ನಟಿ ಶ್ರುತಿ ಅವರು ಚಾಕು ಇರಿತಕ್ಕೆ ಒಳಗಾಗಿದ್ದಾರೆ. ನಟಿ ಶ್ರುತಿ ಅವರ ಪತಿಯೇ ಅವರಿಗೆ ಚಾಕು ಇರಿದಿದ್ದಾರೆ ಎನ್ನಲಾಗುತ್ತಿದೆ. ಪತ್ನಿಯ ಬಗ್ಗೆ ಅನುಮಾನಿಸಿದ ಪತಿ ಅಮರೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಇದೀಗ ಶ್ರುತಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶ್ರುತಿ ಅವರ ಪತಿ ಅಮರೇಶ್ ಅವರನ್ನು ಬಂಧಿಸಿದ್ದಾರೆ.

‘ಅಮೃತಧಾರೆ’ ಸೇರಿದಂತೆ ಕನ್ನಡದ ಇನ್ನೂ ಕೆಲವು ಧಾರಾವಾಹಿಗಳಲ್ಲಿ ನಟಿ ಶ್ರುತಿ ನಟಿಸಿದ್ದಾರೆ. ಶ್ರುತಿ ಮತ್ತು ಅಮರೇಶ್ ನಡುವೆ ಮೊದಲಿನಿಂದಲೂ ಮನಸ್ತಾಪಗಳಿದ್ದವು. ಶ್ರುತಿ ಹಾಗೂ ಅಮರೇಶ್ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಇಬ್ಬರು ಮಕ್ಕಳು ಸಹ ಈ ದಂಪತಿಗೆ ಇದ್ದಾರೆ. ಹನುಮಂತ ನಗರದಲ್ಲಿ ದಂಪತಿ ವಾಸವಿದ್ದರು. ಆದರೆ ಪತ್ನಿಯ ಬಗ್ಗೆ ಅಮರೇಶ್​ಗೆ ಅನುಮಾನಗಳಿದ್ದು, ಇದೇ ಕಾರಣಕ್ಕೆ ಪದೇ-ಪದೇ ಜಗಳಗಳು ನಡೆಯುತ್ತಿದ್ದವು.

ಇದನ್ನು ಓದಿದ್ದೀರಾ? ತಮಿಳು ನಾಡು ಚುನಾವಣೆ: ಟಿವಿಕೆ ಪಕ್ಷದಿಂದ ವಿಜಯ್‌ ಸಿಎಂ ಅಭ್ಯರ್ಥಿ

Advertisements

ಇದೇ ಏಪ್ರಿಲ್ ತಿಂಗಳಲ್ಲಿ ಶ್ರುತಿ, ಅಮರೇಶ್ ಇಂದ ದೂರಾಗಿ ತಮ್ಮ ಅಣ್ಣನ ಮನೆಗೆ ಬಂದಿದ್ದರು. ಅಲ್ಲಿಯೇ ವಾಸವಿದ್ದರು. ಆದರೆ ಅದಾದ ಬಳಿಕವೂ ಸಹ ಮನೆಯ ಭೋಗ್ಯದ ಹಣದ ಕುರಿತಾಗಿ ಜಗಳ ನಡೆದಿತ್ತು. ಇದರ ಕುರಿತಾಗಿ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ನೀಡಿದ್ದರು. ಬಳಿಕ ರಾಜಿ-ಸಂಧಾನ ನಡೆದು ನಿನ್ನೆಯಷ್ಟೆ (ಗುರುವಾರ) ಇಬ್ಬರೂ ಮತ್ತೆ ಒಟ್ಟಿಗೆ ನೆಲೆಸಲು ಒಪ್ಪಿದ್ದರು. ಮುನೇಶ್ವರ ಲೇಔಟ್​ನ ಮನೆಯಲ್ಲಿ ಇಬ್ಬರೂ ವಾಸವಿದ್ದರು. ಆದರೆ ರಾಜಿ-ಸಂಧಾನ ನಡೆದ ಮಾರನೇಯ ದಿನವೇ ಅಂದರೆ ಇಂದು ಅಮರೇಶ್, ಶ್ರುತಿಗೆ ಚಾಕು ಇರಿದಿದ್ದಾನೆ.

ಮೊದಲು ಶ್ರುತಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಹೊಡೆದ ಅಮರೇಶ್ ಆ ನಂತರ ಚಾಕುವಿನಿಂದ ಶ್ರುತಿಯ ಹೊಟ್ಟೆ, ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಶ್ರುತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಮರೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X