ನಾಡಹಬ್ಬ ದಸರಾ ಮಹೋತ್ಸವ ಅರ್ಥಪೂರ್ಣ ಹಾಗೂ ಅದ್ದೂರಿ ಆಚರಣೆಗೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ 31ರಂದು ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ದಸರಾ ಹಬ್ಬವನ್ನು ದಿನಾಂಕ ಅಕ್ಟೋಬರ್‌ 15 ರಿಂದ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಅಕ್ಟೋಬರ್ 24, 2023 ರಂದು ಜಂಬೂ ಸವಾರಿ ನಡೆಯಲಿದೆ. ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.

ವಿಶಿಷ್ಟ ದೀಪಾಲಂಕಾರ

Advertisements

ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ

ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ  ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸೂಚಿಸಿದರು.

ವಸ್ತು ಪ್ರದರ್ಶನ

ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು  ಹಾಗೂ ಎಲ್ಲ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು ಸೂಚಿಸಿದರು.

ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ

ಎಲ್ಲ ಪ್ರಕಾರಗಳಲ್ಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮುಂದಿನ ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಾಮ ಮಂದಿರದ ಮೇಲೆ ದಾಳಿ: ಸತ್ಯಪಾಲ್ ಮಲಿಕ್ ಆರೋಪ

ಏರ್ ಶೋ

ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕೆಂದು. ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಮುಖ್ಯಮಂತ್ರಿಗಳು ತಿಳಿಸಿದರು.

ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು. ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.

ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ  ಅನುದಾನ ಒದಗಿಸುವ ಬಗ್ಗೆ ಹಾಗೂ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಬೇಕು ಎಂದು ತೀರ್ಮಾನಿಸಲಾಯಿತು. 

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಶಿವರಾಜ ತಂಗಡಗಿ, ಹೆಚ್ ಕೆ ಪಾಟೀಲ್, ಭೈರತಿ ಸುರೇಶ್, ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X