ಮಂಡ್ಯ | ವಿಶ್ವ ಜನಸಂಖ್ಯಾ ದಿನಾಚರಣೆ; ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

Date:

Advertisements

ಇಂದು ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಮಂಡ್ಯ ಪಟ್ಟಣದಲ್ಲಿ ಮೈಸೂರಿನ ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಘಟಕ, ರೋಟರಿ ಕ್ಲಬ್ ಶ್ರೀರಂಗಪಟ್ಟಣ, ಅಚೀವರ್ಸ್ ಅಕಾಡೆಮಿ, ಹಾಗೂ ಶಾರದಾ ವಿಲಾಸ್ ಕಾನೂನು ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಜಾಗೃತಿ ಜಾಥಾವನ್ನ ಹಮ್ಮಿಕೊಳ್ಳಲಾಯಿತು.

ಈ ಜಾಥಾಕ್ಕೆ ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಡಾ. ರಾಘವೇಂದ್ರ ಹಸಿರು ನಿಶಾನೆ ತೋರುವ ಮುಖಾಂತರ ಚಾಲನೆ ನೀಡಿ ಮಾತನಾಡಿದರು.

“ಜುಲೈ 11ರಂದು ಪ್ರತಿವರ್ಷ ‘ವಿಶ್ವ ಜನಸಂಖ್ಯಾ ದಿನ’ವನ್ನು ಆಚರಿಸಲಾಗುತ್ತದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ 1987ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವದ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ. ಹೀಗೆ ಈ ದಿನವನ್ನು ಆಚರಿಸುವುದರ ಮೂಲಕ ವಿಶ್ವದಲ್ಲಿ ಜನಸಂಖ್ಯೆಯ ಕುರಿತಾದ ವಿವಿಧ ಸಮಸ್ಯೆಗಳ ಕುರಿತಾಗಿ ವಿಶ್ವ ಸಮುದಾಯದ ಗಮನ ಸೆಳೆಯುವುದು ಈ ಆಚರಣೆಯ ಪ್ರಮುಖ ಉದ್ದೇಶವಾಗಿದ್ದು ಈ ದಿನ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದರು.

Advertisements

ಇದನ್ನೂ ಓದಿ: ಮಂಡ್ಯ | ಕೃಷಿಯೇ ನಮ್ಮ ಭವಿಷ್ಯ: ಕವಿತಾ ಕುರುಗಂಟಿ ಅಭಿಮತ

ಜಾಥಾದಲ್ಲಿ ಶ್ರೀರಂಗಪಟ್ಟಣದ ರೋಟರಿಯ ಕಾರ್ಯದರ್ಶಿ ಎನ್ ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ಉದ್ಯೋಗ ದಾತ ಸಂಸ್ಥೆಯ ಅಧ್ಯಕ್ಷ ರುಕ್ಮಾಂದ, ಶಾರದಾ ವಿಲಾಸ್ ಕಾನೂನು ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಸವಿತಾ, ಓಂಶ್ರೀ ನಿಕೇತನ ಶಾಲೆಯ ಮುಖ್ಯೋಪಾಧ್ಯಾಯ ಶಿವಕುಮಾರ್, ನಾರಾಯಣ, ಪುನೀತ್, ರವಿ, ಎನ್ಎಸ್ಎಸ್ ವಿದ್ಯಾರ್ಥಿಗಳು ಹಾಗೂ ಇತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X