ಉಡುಪಿ | ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

Date:

Advertisements

ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ದಿ ಪಡಿಸಲಾಗಿದ್ದು, ಇಲಾಖೆಯ ಪ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2025” ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡು, ನಂತರ “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆಯನ್ನು ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ, ಜನರೇಟ್ ಓ.ಟಿ.ಪಿ ಆಯ್ಕೆಯನ್ನು ಮಾಡಬೇಕು. ನಂತರದಲ್ಲಿ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓ.ಟಿ.ಪಿ ಯನ್ನು ದಾಖಲಿಸಬೇಕು. ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್‌ಲೋಡ್ ಆಗುತ್ತದೆ. ಮುಂದಿನ ಹಂತದಲ್ಲಿ ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಬೇಕು. ಸರ್ವೆ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು. ಒಂದು ವೇಳೆ ರೈತರು ಎಫ್.ಐ.ಡಿ ಸಂಖ್ಯೆಯನ್ನು ಹೊಂದಿಲ್ಲದಿದ್ದಲ್ಲಿ ಹತ್ತಿರದ ಕೃಷಿ ಅಥವಾ ತೋಟಗಾರಿಕ ಇಲಾಖೆಗಳ ಕಛೇರಿಗಳನ್ನು ಸಂಪರ್ಕಿಸಿ, ಎಫ್.ಐ.ಡಿ ಸಂಖ್ಯೆಯನ್ನು ಮಾಡಿಸಿಕೊಳ್ಳಬೇಕು.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪೃಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.

ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರ್ಕಾರದಿಂದ ಸುವರ್ಣಾವಕಾಶವನ್ನು ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಹಾಗೂ ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು –2025 ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X