ನಿನ್ನೆ ರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಸ್ಥಳದಲ್ಲಿ ಮಹಿಳೆ ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡ ಘಟನೆ ಮಾನ್ವಿ ತಾಲ್ಲೂಕು ಕಾತರಕಿ ಗ್ರಾಮದಲ್ಲಿ ನಡೆದಿದೆ.
ಕಾತರಕಿ ಗ್ರಾಮದ ನಿವಾಸಿ, ತಾಯಮ್ಮ ಗಂಡ ಬೆಂಕಿ ರಮೇಶ್ (35) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಊಟ ಮಾಡಿ ರಾತ್ರಿ ಮಲಗಿದ್ದಾಗ ಬಿರುಸಿನ ಗಾಳಿ ಹಾಗೂ ಧಾರಾಕಾರ ಮಳೆ ಸುರಿದಿದೆ. ಮನೆಯ ಗೋಡೆ ನೆನೆದಿದ್ದರಿಂದ ಗೋಡೆ ಕುಸಿಯಿತು.ಗೋಡೆಗೆ ಹೊಂದಿಕೊಂಡೇ ಮಲಗಿದ್ದ ಕಾರಣ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಹಾಗೂ ಮಗಳಿಗೂ ಕಾಲು ಮುರಿದಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ ಮಗಳಿಗೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಶಾಸಕ ಹಂಪಯ್ಯ ಸಾಹುಕಾರ ಹಾಗೂ ತಹಶೀಲ್ದಾರ ಭೀಮರಾಯ ರಾಮಸಮುದ್ರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಮೃತಳಿಗೆ ಪತಿ, ಓರ್ವ ಪುತ್ರಿ ಇದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
