ಧಾರವಾಡ | ಜು.14ರಂದು ಹೊಸೂರ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮ

Date:

Advertisements

2023ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಅವುಗಳನ್ನು ಸಕಾರಾತ್ಮಕವಾಗಿ ಅನುಷ್ಠಾನಗೊಳಿಸಿದೆ. ಆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಜುಲೈ 14ರಂದು ಹುಬ್ಬಳ್ಳಿಯ ಹೊಸೂರ ಬಸ್ ನಿಲ್ದಾಣದಲ್ಲಿ ಬಸ್ ಪೂಜೆ ಹಾಗೂ ಸಾರ್ವಜನಿಕರಿಗೆ ಸಹಿ ಹಂಚುವ ಮೂಲಕ ಸಂಭ್ರಮಿಸಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಶ್ಯಾನಪ್ಪಗೌಡ ಆರ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಐದು ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯನ್ನು ಮೊಟ್ಟಮೊದಲಿಗೆ ಸರ್ಕಾರ ಜಾರಿಗೊಳಿಸಿದೆ. 2023ರ ಜೂನ್‌ 11ರಂದು ಶಕ್ತಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿದೆ. ಈ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ ಈಗ ₹500 ಕೋಟಿ ಗಡಿಯನ್ನು ದಾಟಿರುತ್ತದೆ. ಇದೊಂದು ಸಂಭ್ರಮದ ಸಂಗತಿ. ಹೆಣ್ಣುಮಕ್ಕಳಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಿರುವಂತಹ ಏಕೈಕ ಸರ್ಕಾರ ಕಾಂಗ್ರೆಸ್‌ ಸರ್ಕಾರವಾಗಿದೆ” ಎಂದು ಹೇಳಿದರು.

“ಶಕ್ತಿ ಯೋಜನೆಯಡಿಯಲ್ಲಿ ನಾಡಿನ 500 ಕೋಟಿ ಹೆಣ್ಣುಮಕ್ಕಳು ರಾಜ್ಯದ ಎಲ್ಲ ಸರ್ಕಾರಿ ಸ್ವಾಮ್ಯದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹೆಗ್ಗಳಿಕೆಯನ್ನು ಸರಳ ಹಾಗೂ ಸಂಭ್ರಮವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಹಾಗೂ ತಾಲೂಕು ಸಮಿತಿಯಿಂದ ಆಚರಿಸುತ್ತಿದ್ದಾರೆ. ಆದ್ದರಿಂದ, ರಾಜ್ಯದಲ್ಲಿ ಶಕ್ತಿ ಯೋಜನೆ ಅಡಿಯಲ್ಲಿ 500 ಕೋಟಿ ಫಲಾನುಭವಿಗಳು ಪ್ರಯಾಣಿಸಿರುವುದನ್ನು ಸಾಂಕೇತಿಕವಾಗಿ ಜುಲೈ 14ರ ಬೆಳಿಗ್ಗೆ 10:30ಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳ ಹಾಗೂ ತಾಲೂಕುಗಳ ಬಸ್ ಡಿಪೋ, ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಸಮಿತಿಯ ಸದಸ್ಯರುಗಳು ಒಂದು ಬಸ್ಸಿಗೆ ಪೂಜೆಯನ್ನು ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವುದರೊಂದಿಗೆ ಆಚರಿಸಲಿದ್ದಾರೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ | ನನ್ನ ವಿರುದ್ಧ ಸೋತ ಅಭ್ಯರ್ಥಿಯ ದೂರಿನನ್ವಯ ಇಡಿ ದಾಳಿ: ಶಾಸಕ ಸುಬ್ಬಾರೆಡ್ಡಿ

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷರು, ಸಂಸ್ಥೆಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಬೆಳಗಾವಿ ವಿಭಾಗದ ಉಸ್ತುವಾರಿ ಎಸ್ ಆರ್ ಪಾಟೀಲ, ಜಿಲ್ಲೆಯ ಶಾಸಕರು, ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಧಾರವಾಡ ಪ್ರಾಧಿಕಾರದ ಅಧ್ಯಕ್ಷ ಶ್ಯಾನಪ್ಪಗೌಡ ಆರ್ ಪಾಟೀಲ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X