ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

Date:

Advertisements
  • ಸಿದ್ದರಾಮಯ್ಯ ವಿರುದ್ದ ಎರಡು ದೂರು ದಾಖಲು
  • ಚುನಾವಣಾ ಅಧಿಕಾರಿಗೆ ಪತ್ರ ಸಲ್ಲಿಸಿದ ಬಿಜೆಪಿ ನಾಯಕರು

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಜೆಪಿ, “ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರ ಬಿಳಗುಲಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ಮಾಡುತ್ತಿದ್ದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದೆ.

“ಚುನಾವಣಾ ನೀತಿಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ಸಂಜೆ 4.15ರ ಸುಮಾರಿಗೆ ಪ್ರಚಾರ ಸ್ಥಳದಲ್ಲಿದ್ದ ವಾಲಗ ಮತ್ತು ಡೋಲು ಬಾರಿಸುವವರಿಗೆ ಸುಮಾರು 1 ಸಾವಿರ ರೂಪಾಯಿ ನೀಡಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ” ಎಂದು ಬಿಜೆಪಿ ಮನವಿ ಮಾಡಿದೆ.

Advertisements

ಈ ಸಂಬಂಧ ಮಾರ್ಚ್ 30ನೇ ತಾರೀಖು ಬಿಜೆಪಿ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದೆ. ಹಣ ಹಂಚಿರುವ ವಿಡಿಯೋದ ಲಿಂಕ್ ವಿವರವನ್ನು ಮನವಿ ಪತ್ರದಲ್ಲಿ ನೀಡಲಾಗಿದೆ ಎಂದು ಬಿಜೆಪಿ ತಿಳಿಸಿದೆ.

ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ವಕ್ತಾರ ಡಾ. ರಾಘವೇಂದ್ರ ರಾವ್, ಕಾನೂನು ಪ್ರಕೋಷ್ಠದ ಸದಸ್ಯ ಶಿವಕುಮಾರ್ ಅವರ ನಿಯೋಗವು ಈ ದೂರುಗಳನ್ನು ಸಲ್ಲಿಸಿದೆ.ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಚುನಾವಣಾ ಆಯೋಗದ ವಿಶ್ವಾಸಾರ್ಹತೆಗೆ ಧಕ್ಕೆ ಬರುವಂತೆ ಮಾತನಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮತ್ತೊಂದು ದೂರು ದಾಖಲಿಸಿದೆ.

“ಕಾಂಗ್ರೆಸ್ ಕಟ್ಟಿಹಾಕುವುದಕ್ಕಾಗಿಯೇ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳನ್ನು ಚುನಾವಣಾ ಆಯೋಗ ನಿಯೋಜಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದು, ಇದು ಸಂವಿಧಾನಾತ್ಮಕ ಸಂಸ್ಥೆಯ ವಿರುದ್ಧ ಆಧಾರರಹಿತ ಆರೋಪವಾಗಿದೆ. ಇದರಿಂದ ಜನರ ಮನಸ್ಸಿನಲ್ಲಿ ಸಂಸ್ಥೆಯ ವಿರುದ್ಧ ನಕಾರಾತ್ಮಕ ಅಭಿಪ್ರಾಯ ಮೂಡಿಸುವಂತಿದೆ” ಎಂದು ಬಿಜೆಪಿ ಸೂಕ್ತ ಕ್ರಮಕ್ಕೆ ಕೋರಿದೆ.

ಈ ಸುದ್ದಿ ಓದಿದ್ದೀರಾ? ‘ಸಾಮ್ರಾಟ’ನ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್: ಪದ್ಮನಾಭನಗರದಿಂದ ಪಿಜಿಆರ್ ಕಣಕ್ಕೆ?

ಸುರ್ಜೇವಾಲಾ ವಿರುದ್ಧ ದೂರು

“ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ. ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕರ್ನಾಟಕ ಚುನಾವಣೆ ಸಂಬಂಧ ನೀಡಿದ ಹೇಳಿಕೆಯಲ್ಲಿ “ಬಿಜೆಪಿಯ 40% ಸರ್ಕಾರ ರಾಜ್ಯವನ್ನು ನಿರ್ಲಜ್ಜವಾಗಿ ಲೂಟಿ ಮಾಡುತ್ತಿದೆ” ಎಂಬುದಾಗಿ ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿ ಮತದಾರರಲ್ಲಿ ತಪ್ಪು ಮಾಹಿತಿ ನೀಡಿ, ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಸುರ್ಜೇವಾಲಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕೋರಲಾಗಿದೆ” ಎಂದು ಬಿಜೆಪಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X