ಭೀಕರ ಅವಘಡ | ಹೊತ್ತಿ ಉರಿದ ಕಚ್ಚಾ ತೈಲ ಸಾಗಿಸುತಿದ್ದ ರೈಲು; ಸಾವಿರಾರು ಜನರಿಗೆ ತೊಂದರೆ

Date:

Advertisements

ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ರೈಲೊಂದು ಭಾನುವಾರ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಬೆಂಕಿ ಜ್ವಾಲಾಮುಖಿಯಂತೆ ಚಿಮ್ಮಿರುವ ಘಟನೆ ತಮಿಳುನಾಡಿನ ತಿರುವಲ್ಲೂರು ಬಳಿ ನಡೆದಿದೆ. ಪರಿಣಾಮ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿವೆ. ಸಾವಿರಾರು ರೈಲು ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ.

ಬೆಂಕಿ ಅವಘಡದಿಂದಾಗಿ ಬೆಂಕಿಯ ಜ್ವಾಲೆಗಳು ಎತ್ತರಕ್ಕೆ ಚಿಮ್ಮಿದ್ದು, ದಟ್ಟ ಹೊಗೆ ಆವರಿಸಿದೆ. ರೈಲ್ವೇ ಹಳಿಗಳ ಸಮೀಪ ವಾಸಿಸುವ ನಿವಾಸಿಗಳು ಭಯಭೀತರಾಗಿದ್ದಾರೆ. ಅವರನ್ನು ತ್ವರಿತವಾಗಿ ಸ್ಥಳಾಂತರಿಸಲಾಗಿದೆ.

ಭಾನುವಾರ ಮುಂಜಾನೆ ಎನ್ನೋರ್‌ನಿಂದ ಜೋಲಾರ್‌ಪೆಟ್ಟೈಗೆ ಕಚ್ಚಾ ತೈಲ ಸಾಗಿಸುತ್ತಿದ್ದ 45 ಬೋಗಿಗಳನ್ನು ಹೊಂದಿರುವ ಸರಕು ರೈಲು ತಿರುವಲ್ಲೂರು ಬಳಿ ಸಂಚರಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಎರಡು ವ್ಯಾಗನ್‌ಗಳು ಹಳಿತಪ್ಪಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಆದಾಗ್ಯೂ, ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ. ಬೆಂಕಿ ಕಾಣಿಸಿಕೊಂಡ ಐದು ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದೆ ಎಂದು ರೈಲ್ವೇ ಮೂಲಗಳು ತಿಳಿಸಿವೆ.

Advertisements

ನಾಲ್ಕು ಬೋಗಿಗಳು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟುಹೋಗಿವೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಭಾರೀ ಬೆಂಕಿಯಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಳಿಗಳ ಬಳಿ ವಾಸಿಸುವ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಿಂದಾಗಿ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿನ ಎಲ್ಲ ಉಪನಗರ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಚೆನ್ನೈಗೆ ಹೊರಟಿದ್ದ ಮಂಗಳೂರು ಮೈಲ್, ನೀಲಗಿರಿ ಎಕ್ಸ್‌ಪ್ರೆಸ್, ಮೈಸೂರು ಎಕ್ಸ್‌ಪ್ರೆಸ್, ಕೊಯಮತ್ತೂರು ಇಂಟರ್‌ಸಿಟಿ, ತಿರುವನಂತಪುರಂ ಮೈಲ್ ಮತ್ತು ಜೋಲಾರ್‌ಪೆಟ್ಟೈ ಎಕ್ಸ್‌ಪ್ರೆಸ್ ಸೇರಿದಂತೆ ಸುಮಾರು ಎಂಟು ಎಕ್ಸ್‌ಪ್ರೆಸ್ ರೈಲುಗಳನ್ನು ಅರಕ್ಕೋಣಂ ಮತ್ತು ಕಟ್ಪಾಡಿ ನಡುವೆ ನಿಲ್ಲಿಸಲಾಗಿದೆ.

ಅದೇ ರೀತಿ, ಚೆನ್ನೈ-ಮೈಸೂರು ಶತಾಬ್ದಿ, ಚೆನ್ನೈ-ಕೊಯಮತ್ತೂರು ಕೋವೈ ಎಕ್ಸ್‌ಪ್ರೆಸ್, ಚೆನ್ನೈ-ತಿರುಪತಿ ಸಪ್ತಗಿರಿ ಎಕ್ಸ್‌ಪ್ರೆಸ್ ಹಾಗೂ ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ಸೇರಿದಂತೆ ಚೆನ್ನೈ ಸೆಂಟ್ರಲ್‌ನಿಂದ ಹೊರಡಬೇಕಿದ್ದ ಎಂಟು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ನಾಲ್ಕು ರೈಲುಗಳು ಗುಡೂರು ಮತ್ತು ರೇಣಿಗುಂಟ ಮಾರ್ಗದ ಮುಲಕ ಸಂಚರಿಸುತ್ತಿವೆ.

ಸ್ಥಳ ಪರಿಶೀಲನೆ ನಡೆಸಿದ ತಿರುವಳ್ಳೂರು ಜಿಲ್ಲಾಧಿಕಾರಿ ಎಂ. ಪ್ರತಾಪ್, “ಹಳಿ ಪಕ್ಕದಲ್ಲಿರುವ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಬೆಂಕಿ ನಿಯಂತ್ರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪರಿಹಾರ ಕಾರ್ಯಾಚರಣೆಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅರಕ್ಕೋಣಂ ಘಟಕದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X