ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಐಎಎಸ್ ಅಧಿಕಾರಿ; ವಿಡಿಯೋ ವೈರಲ್

Date:

Advertisements

ಮಧ್ಯಪ್ರದೇಶದ ಭಿಂಡ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಐಎಎಸ್ ಅಧಿಕಾರಿ ಸಂಜೀವ್ ಶ್ರೀವಾಸ್ತವ ಅವರು ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷಾ ಕೊಠಡಿಯಲ್ಲಿ ಹಲವು ಬಾರಿ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಘಟನೆ ಎಪ್ರಿಲ್ 1ರಂದು ದೀನದಯಾಳ್ ದಂಗ್ರೌಲಿಯಾ ಮಹಾವಿದ್ಯಾಲಯದಲ್ಲಿ ಬಿಎಸ್ಸಿ 2ನೇ ವರ್ಷದ ಗಣಿತ ಪರೀಕ್ಷೆಯ ಸಮಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ವಿಡಿಯೋದಲ್ಲಿ ಸಂಜೀವ್ ಶ್ರೀವಾಸ್ತವ ಅವರು ವಿದ್ಯಾರ್ಥಿಯನ್ನು ತನ್ನ ಆಸನದಿಂದ ಎಳೆದು ಪದೇ ಪದೇ ಕಪಾಳಮೋಕ್ಷ ಮಾಡುತ್ತಿರುವುದು ಕಂಡು ಬಂದಿದೆ.

ಕಾಲೇಜಿನಲ್ಲಿ ಸಾಮೂಹಿಕ ಪರೀಕ್ಷಾ ಅಕ್ರಮ ನಡೆಯುತ್ತಿದೆ ಎಂಬ ಸುಳಿವು ನಮಗೆ ಸಿಕ್ಕಿತ್ತು. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಎಲ್ಲವೂ ಸಾಮಾನ್ಯವಾಗಿದ್ದಂತೆ ಕಂಡುಬಂದಿದೆ. ಪರೀಕ್ಷಾ ಕೊಠಡಿಯಲ್ಲಿ ಎಲ್ಲರೂ ಸದ್ದಿಲ್ಲದೆ ಕುಳಿತಿದ್ದರು. ಅದು ಗಣಿತ ಪತ್ರಿಕೆಯಾಗಿತ್ತು. ಓರ್ವ ವಿದ್ಯಾರ್ಥಿಯ ಬಳಿ ಮಾತ್ರ ಪ್ರಶ್ನೆ ಪತ್ರಿಕೆ ಇರಲಿಲ್ಲ. ಆತನನ್ನು ಪ್ರಶ್ನಿಸಿದಾಗ ಆತ ತನ್ನ ಪ್ರಶ್ನೆ ಪತ್ರಿಕೆಯನ್ನು ಉತ್ತರಕ್ಕಾಗಿ ಹೊರಗೆ ಕಳುಹಿಸಿರುವುದಾಗಿ ಹೇಳಿದ್ದಾನೆ. ಸಾಮೂಹಿಕ ನಕಲನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆʼ ಎಂದು ಶ್ರೀವಾಸ್ತವ ಅವರು ಹೇಳಿದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

ʼನಾನು ಶೌಚಾಲಯಕ್ಕೆ ಹೋಗಿದ್ದೆ. ನನ್ನ ಪ್ರಶ್ನೆ ಪತ್ರಿಕೆ ಮೇಜಿನ ಮೇಲಿತ್ತು. ಆದರೆ, ನಾನು ಹಿಂತಿರುಗಿದಾಗ ಅದು ಅಲ್ಲಿರಲಿಲ್ಲ. ತಕ್ಷಣ ಜಿಲ್ಲಾಧಿಕಾರಿ ಬಂದರು. ಪರಿಶೀಲನೆಯ ಸಮಯದಲ್ಲಿ ಓರ್ವ ವಿದ್ಯಾರ್ಥಿಯ ಬಳಿ ಎರಡು ಪ್ರಶ್ನೆ ಪತ್ರಿಕೆಗಳಿದ್ದವು. ನಾನು ಎರಡನೇ ಟೇಬಲ್‌ನಲ್ಲಿ ಕುಳಿತಿದ್ದೆ. ನನ್ನ ಬಳಿ ಪ್ರಶ್ನೆ ಪತ್ರಿಕೆ ಇರಲಿಲ್ಲ. ಸರ್ ನನ್ನನ್ನು ಎದ್ದು ನಿಲ್ಲುವಂತೆ ಮಾಡಿ, ಎರಡು ಬಾರಿ ಹೊಡೆದರು. ನಂತರ ಕೆಳಗಡೆ ಕರೆದೊಯ್ದು ಮತ್ತೆ ಹೊಡೆದರು. ನನಗೆ ನೋವಾಯಿತು, ನನ್ನ ತಂದೆಯ ಮೆಡಿಕಲ್ ಶಾಪ್‌ನಿಂದ ಔಷಧಿ ತೆಗೆದುಕೊಂಡೆ. ಉತ್ತರಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ಹೊರಗೆ ಕಳುಹಿಸಿಲ್ಲʼ ಎಂದು ವಿದ್ಯಾರ್ಥಿ ರೋಹಿತ್ ರಾಥೋಡ್ ಹೇಳಿದ್ದಾನೆ.

ಐಎಎಸ್ ಅಧಿಕಾರಿ ಸಂಜೀವ್ ಶ್ರೀವಾಸ್ತವ ವಿವಾದ ಹೊಸದೇನು ಇಲ್ಲ. ಈ ಹಿಂದೆ ಅಧಿಕಾರಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಗ್ವಾಲಿಯರ್‌ ಪೀಠ ಛೀಮಾರಿ ಹಾಕಿತ್ತು. ಹಾಗೆಯೇ ಮುಖ್ಯ ಕಾರ್ಯದರ್ಶಿ ಕೂಡ ಶ್ರೀವಾಸ್ತವ ಅವರಿಗೆ ಎಚ್ಚರಿಕೆ ನೀಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X