ಜು.14ರಿಂದ ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್ ಬಸ್ ಆರಂಭ

Date:

Advertisements

ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು-ಮಂಗಳೂರು ತಡೆರಹಿತ(ನಾನ್ ಸ್ಟಾಪ್) ಎಕ್ಸ್‌ಪ್ರೆಸ್ ಬಸ್‌ ಸಂಚಾರ ಜುಲೈ 14ರಂದು ಪ್ರಾರಂಭಗೊಳ್ಳಲಿದೆ.

ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್‌ ಎಲ್ಲೂ ನಿಲುಗಡೆಯಾಗದೆ ನೇರವಾಗಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ತಲುಪಲಿದೆ. ಪ್ರತಿ ಒಂದು ಗಂಟೆಗೊಂದು ಬಸ್ ಹೊರಡಲಿದೆ. ಮಹಿಳೆಯರು ಈ ಬಸ್‌ನಲ್ಲಿ ಶಕ್ತಿ ಯೋಜನೆಯನುಸಾರ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ನಾಳೆ ಬೆಳಿಗ್ಗೆ 11ಕ್ಕೆ ನೂತನ ಬಸ್ ವ್ಯವಸ್ಥೆಗೆ ಶಾಸಕರು ಚಾಲನೆ ನೀಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಕಾರು ಅಪಘಾತ: ಮಂಡ್ಯದ ಮೂವರ ಸಾವು

Advertisements
ಅಶೋಕ್‌ ರೈ

ಸುಮಾರು ಒಂದು ಗಂಟೆ ಅವಧಿಯಲ್ಲಿ ಬಸ್ ಪುತ್ತೂರಿನಿಂದ ಮಂಗಳೂರು ತಲುಪಲಿದೆ. ಸ್ವಂತ ವಾಹನ ಇದ್ದವರೂ ಈ ಬಸ್ಸಲ್ಲಿ ತೆರಳಬಹುದಾಗಿದೆ. ಯಾಕೆಂದರೆ ಅತಿ ವೇಗದಲ್ಲಿ ಈ ಬಸ್ಸು‌ ಸಂಚರಿಸುವ ಕಾರಣ ಸ್ವಂತ ವಾಹನದಷ್ಟೇ ಸಮಯದಲ್ಲಿ ಮಂಗಳೂರು ತಲುಪಬಹುದು. ಹೊಸ ವ್ಯವಸ್ಥೆಯಲ್ಲಿ ಎಲ್ಲರೂ ಪ್ರಯಾಣಿಸುವ ಮೂಲಕ ಸಹಕಾರ ನೀಡಿ ಸರ್ಕಾರಿ ವ್ಯವಸ್ಥೆಗೆ ಬೆಂಬಲ ನೀಡಬೇಕು‌ ಎಂದು ಪುತ್ತೂರು ಶಾಸಕ ಅಶೋಕ್ ರೈ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X