ಸಗಣಿ ರಾಶಿಯೊಳಗೆ 20 ಲಕ್ಷ ರೂ. ಹಣ ಪತ್ತೆ

Date:

Advertisements

ಹಣ ಕಳವು ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ಆರೋಪಿಯ ಗ್ರಾಮದ ಮೇಲೆ ದಾಳಿ ಮಾಡಿದ್ದು, ಸಗಣಿ ರಾಶಿಯೊಳಗೆ 20 ಲಕ್ಷ ರೂ. ಹಣ ಪತ್ತೆಯಾಗಿದೆ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಬದಮಂದರುನಿ ಗ್ರಾಮದ ಮೇಲೆ ಹೈದರಾಬಾದ್ ಮತ್ತು ಒಡಿಶಾ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಈ ವೇಳೆ, ಗ್ರಾಮದಲ್ಲಿದ್ದ ಸಗಣಿ ರಾಶಿಯಲ್ಲಿ ಹಣ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬದಮಂದರುನಿ ಗ್ರಾಮದವನೇ ಆದ, ಹಣ ಕದಿದ್ದ ಆರೋಪಿ ಗೋಪಾಲ್ ಬೆಹೆರಾ ಎಂಬಾತ ಹೈದರಾಬಾದ್ ಮೂಲದ ಕೃಷಿಯಾಧಾರಿಕ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಂಪನಿಯ ಲಾಕರ್‌ನಿಂದ 20 ಲಕ್ಷಕ್ಕೂ ಹೆಚ್ಚು ಹಣವನ್ನು ಕದ್ದು, ತನ್ನ ಸಂಬಂಧಿ ಮೂಲಕ ಗ್ರಾಮಕ್ಕೆ ರವಾನಿಸಿದ್ದಾನೆ ಆರೋಪಿಸಲಾಗಿದೆ.

Advertisements

ಕಂಪನಿಯು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಗೋಪಾಲ್ ಮತ್ತು ಆತನ ಸಂಬಂಧಿ ರಬೀಂದ್ರನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಸಗಣಿಯ ರಾಶಿಯಲ್ಲಿ ಬಚ್ಚಿಟ್ಟಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X