ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ‘ಕೈಗೊಂಬೆ’ಯಾಗಿದೆ: ಕಪಿಲ್ ಸಿಬಲ್

Date:

Advertisements

ಚುನಾವಣಾ ಆಯೋಗವು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೈಯಲ್ಲಿ ‘ಕೈಗೊಂಬೆ’ಯಾಗಿದೆ ಎಂದು ರಾಜ್ಯಸಭಾ ಸದಸ್ಯ, ಹಿರಿಯ ವಕೀಲ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಚುನಾವಣಾ ಸಂಸ್ಥೆಯ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಬಹುಮತದ ಸರ್ಕಾರಗಳು ಅಧಿಕಾರದಲ್ಲಿ ಉಳಿಯುವಂತೆ ನೋಡಿಕೊಳ್ಳುವ ಸಂವಿಧಾನಬಾಹಿರ ಕ್ರಮವಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕಪಿಲ್ ಸಿಬಲ್, “ಪ್ರತಿಯೊಬ್ಬ ಚುನಾವಣಾ ಆಯುಕ್ತರು ಸರ್ಕಾರದೊಂದಿಗೆ ಹೊಂದಾಣಿಕೆ ವಿಚಾರದಲ್ಲಿ ಈ ಹಿಂದಿನ ಚುನಾವಣಾ ಆಯುಕ್ತರನ್ನು ಮೀರಿಸುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

ಇದನ್ನು ಓದಿದ್ದೀರಾ? ಪೌರತ್ವ ಪ್ರಮಾಣಪತ್ರ ನೀಡುವುದು ಚುನಾವಣಾ ಆಯೋಗದ ಕೆಲಸವಲ್ಲ; ಮಾಜಿ ಚುನಾವಣಾ ಆಯುಕ್ತ ಅಶೋಕ್ ಲವಾಸಾ ಹೀಗಂದಿದ್ದೇಕೆ?

ಈ ಸಂದರ್ಭದಲ್ಲೇ ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಬಗ್ಗೆ ಟೀಕಿಸಿದ ಮಾಜಿ ಕಾನೂನು ಸಚಿವ ಸಿಬಲ್, “ಚುನಾವಣಾ ಆಯೋಗವು ಪೌರತ್ವದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರವನ್ನು ಹೊಂದಿಲ್ಲ” ಎಂದು ಹೇಳಿದರು. ಈ ಹಿಂದೆ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲವಾಸಾ ಕೂಡಾ ಈ ರೀತಿಯ ಹೇಳಿಕೆ ನೀಡಿದ್ದರು. “ಪೌರತ್ವ ಪ್ರಮಾಣಪತ್ರ ನೀಡುವುದು ಚುನಾವಣಾ ಆಯೋಗದ ಕೆಲಸವಲ್ಲ” ಎಂದಿದ್ದರು.

ಎಸ್‌ಐಆರ್ ವಿಚಾರದಲ್ಲಿ ಚುನಾವಣಾ ಆಯೋಗದ ಮೇಲೆ ದಾಳಿ ನಡೆಸಿದ ಸಿಬಲ್, “ಸದ್ಯ ಇರುವ ಸರ್ಕಾರ ಅಧಿಕಾರ ವಹಿಸಿಕೊಂಡ ದಿನದಿಂದ ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಿದೆ. ಚುನಾವಣಾ ಆಯೋಗದ ನಡವಳಿಕೆ, ಅದರ ಬಗ್ಗೆ ಕಡಿಮೆ ಮಾತನಾಡಿದಷ್ಟೂ ಉತ್ತಮ” ಎಂದರು.

“ಬಡವರು, ಅಂಚಿನಲ್ಲಿರುವವರು, ಆದಿವಾಸಿಗಳ ಹೆಸರುಗಳನ್ನು ಅಳಿಸಿದರೆ, ಬಹುಸಂಖ್ಯಾತ ಪಕ್ಷ ಯಾವಾಗಲೂ ಗೆಲ್ಲುತ್ತದೆ ಎಂಬುದು ಈ ಪರಿಷ್ಕರಣೆ ಹಿಂದಿರುವ ಉದ್ದೇಶ. ಆದ್ದರಿಂದ ಇದು ತುಂಬಾ ಕಳವಳಕಾರಿ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು...

ಭಾರತದಲ್ಲಿ ಪ್ರತಿ ಗಂಟೆಗೆ ಓರ್ವ ರೈತ ಆತ್ಮಹತ್ಯೆ: NCRB ವರದಿ

ಭಾರತದಲ್ಲಿನ ಅಪರಾಧ ಪ್ರಕರಣಗಳ ಕುರಿತಾಗಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB)...

Download Eedina App Android / iOS

X