ಸಿಗರೇಟ್ ಜತೆ ಆರೋಗ್ಯ ಎಚ್ಚರಿಕೆ ಪಟ್ಟಿಗೆ ಸೇರಿದ ಚಹಾ, ಸಮೋಸಾ, ಜಿಲೇಬಿ,ಬಿಸ್ಕತ್

Date:

Advertisements

ಬಹುತೇಕ ಮಂದಿಯ ಅಚ್ಚುಮೆಚ್ಚಿನ ತಿನಸುಗಳಾದ ಜಿಲೇಬಿ, ಸಮೋಸಾ, ಬಿಸ್ಕತ್ ಹಾಗೂ ನಿತ್ಯ ಸೇವಿಸುವ ಚಹಾ ಕೂಡಾ “ಅಪಾಯಕಾರಿ” ಎಂಬ ಎಚ್ಚರಿಕೆಯ ಫಲಕಗಳೊಂದಿಗೆ ಲಭ್ಯವಾಗಲಿವೆ.

ನಾಗ್ಪುರ ಎಐಐಎಂಎಸ್ ಸೇರಿದಂತೆ ಎಲ್ಲ ಕೇಂದ್ರೀಯ ಸಂಸ್ಥೆಗಳು, ಜನಸಾಮಾನ್ಯರ ದೈನಂದಿನ ತಿಂಡಿ ತಿನಸುಗಳಲ್ಲಿ ಎಷ್ಟರ ಮಟ್ಟಿಗೆ ಜಿಡ್ಡು ಮತ್ತು ಸಕ್ಕರೆ ಅಂಶಗಳು ಹುದುಗಿರುತ್ತವೆ ಎಂಬ ಬಗ್ಗೆ ಫಲಕಗಳನ್ನು ಅಳವಡಿಸುವಂತೆ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಜಂಕ್ ಫುಡ್ ಉತ್ಪನ್ನಗಳನ್ನು ತಂಬಾಕಿನ ಸಾಲಿಗೆ ಸೇರಿಸುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆ ಎನ್ನಲಾಗಿದೆ.

ಸರ್ಕಾರಿ ಸಂಸ್ಥೆಗಳಲ್ಲಿ ಅಳವಡಿಕೆಯಾಗಲಿರುವ ಈ ಫಲಕಗಳು ಜನಸಾಮಾನ್ಯರಿಗೆ ಸಾಂಪ್ರದಾಯಿಕ ತಿಂಡಿ ತಿನಸುಗಳು ಎಂದು ಬಳಕೆಯಾಗುತ್ತಿರುವ ಈ ಖಾದ್ಯಗಳಲ್ಲಿ ಅಡಗಿರುವ ಸಕ್ಕರೆ ಮತ್ತು ಜಿಡ್ಡಿನ ಅಂಶದ ಬಗ್ಗೆ ಎಚ್ಚರಿಕೆ ನೀಡಲಿವೆ. ಲಡ್ಡು, ವಡಾ-ಪಾವ್, ಪಕೋಡಾದಂಥ ತಿನಸುಗಳ ಮೇಲೆಯೂ ನಿಗಾ ವಹಿಸಲಾಗುತ್ತದೆ. ಈ ನಿರ್ದೇಶನವನ್ನು ಎಐಐಎಂಎಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

ಈ ಎಚ್ಚರಿಕೆಯನ್ನು ನೀಡುವ ಫಲಕಗಳನ್ನು ಕೆಫೆಟೇರಿಯಾ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

“ಸಿಗರೇಟ್ ಎಚ್ಚರಿಕೆಯಂತೆ ಆಹಾರದ ಲೇಬಲಿಂಗ್ ನಲ್ಲಿ ಸಹ ಎಚ್ಚರಿಕೆ ಸಂದೇಶ ನೀಡುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆ” ಎಂದು ಭಾರತೀಯ ಹೃದ್ರೋಗ ತಜ್ಞರ ಸಂಘದ ನಾಗ್ಪುರ ಶಾಖೆಯ ಅಧ್ಯಕ್ಷ ಅಮರ್ ಅಮಾಲ್ ಹೇಳಿದ್ದಾರೆ. ಸಕ್ಕರೆ ಮತ್ತು ವರ್ಗಾಂತರದ ಕೊಬ್ಬಿನ ಅಂಶಗಳು ಹೊಸ ತಂಬಾಕು. ಜನರಿಗೆ ತಾವು ಏನು ತಿನ್ನುತ್ತಿದ್ದೇವೆ ಎಂಬ ಬಗ್ಗೆ ಅರಿವು ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X