ಡಿಜಿಪಿ ಖುದ್ದು ಹಾಜರಾಗಬೇಕು : ಮಣಿಪುರ ಆಡಳಿತ ವ್ಯವಸ್ಥೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ

Date:

Advertisements
  • ‘ಪೊಲೀಸರು ತನಿಖೆ ನಡೆಸುವ ಸಾಮರ್ಥ್ಯ ಹೊಂದಿಲ್ಲ’ ಎಂದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ
  • ಮಣಿಪುರ ಡಿಜಿಪಿ ಆಗಸ್ಟ್ 7ರಂದು ಖುದ್ದಾಗಿ ಸುಪ್ರೀಂಗೆ ಹಾಜರಾಗಲು ಖಡಕ್ ಆದೇಶ

ಮಣಿಪುರ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಮಣಿಪುರ ಆಡಳಿತ ವ್ಯವಸ್ಥೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮಣಿಪುರದ ಡಿಜಿಪಿ ಖುದ್ದು ಹಾಜರಾಗುವಂತೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್, ಹಿಂಸಾಚಾರದ ಕುರಿತಂತೆ ಅಲ್ಲಿನ ಪೊಲೀಸರಿಂದ ನಡೆಯುತ್ತಿರುವ ತನಿಖೆ ಜಡತ್ವದಿಂದ ಕೂಡಿದೆ ಎಂದು ಆಕ್ರೋಶ ಹೊರಹಾಕಿದೆ.

‘ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಮುಂದಿನ ವಿಚಾರಣೆ ಆಗಸ್ಟ್ 7ರಂದು ನಡೆಸುತ್ತೇವೆ. ಅಂದು ಮಣಿಪುರದ ಪೊಲೀಸ್ ಮಹಾನಿರ್ದೇಶಕರು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಬೇಕು’ ಎಂದು ಖಡಕ್ ಆದೇಶ ನೀಡಿದೆ.

Advertisements

ಎಫ್‌ಐಆರ್‌ಗಳನ್ನು ದಾಖಲಿಸುವಲ್ಲಿ, ಬಂಧನ ಮತ್ತು ಹೇಳಿಕೆಗಳನ್ನು ದಾಖಲಿಸುವಲ್ಲಿ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಗಮನಿಸಿರುವ ತ್ರಿಸದಸ್ಯ ಪೀಠವು, ಮೇ ಆರಂಭದಿಂದ ಜುಲೈ ಅಂತ್ಯದವರೆಗೆ ಇಲ್ಲಿ ಯಾವುದೇ ಕಾನೂನು ಇರಲಿಲ್ಲ ಎಂಬ ಭಾವನೆ ನ್ಯಾಯಾಲಯಕ್ಕೆ ಮೂಡುತ್ತದೆ ಎಂದು ಕಿಡಿಕಾರಿದೆ.

ಇದನ್ನು ಓದಿದ್ದೀರಾ? ಮಣಿಪುರ | ಲೋಕಸಭೆಯಲ್ಲಿ ವಿಪಕ್ಷಗಳ ಪ್ರತಿಭಟನೆ: ಆಗ ಮೈಕ್ ಕಿತ್ತರು, ಈಗ ಕ್ಯಾಮರಾ ತಿರುಗಿಸಿದರು!

ಹಿಂಸಾತ್ಮಕ ಘಟನೆಗಳು ನಡೆದು ಸುಮಾರು ಮೂರು ತಿಂಗಳುಗಳೇ ಸಂದರೂ ಎಫ್‌ಐಆರ್‌ಗಳು ದಾಖಲಾಗದೇ ಇರುವುದು ಮತ್ತು ಇಲ್ಲಿಯ ತನಕ ದಾಖಲಾಗಿರುವ 6000 ಎಫ್‌ಐಆರ್‌ಗಳಲ್ಲಿ ಕೆಲವೇ ಕೆಲವು ಮಂದಿಯ ಬಂಧನವಾಗಿರುವುದರ ಕಳವಳ ಹಾಗೂ ಆಘಾತ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ವಿಡಿಯೊ ಪ್ರಕರಣದಲ್ಲಿನ ಸಂತ್ರಸ್ತರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಸಿಬಿಐಗೆ ಅನುಮತಿ ನೀಡಿದೆ.

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆಯ ವಿಡಿಯೋ ವೈರಲ್ ಆದ ಬಳಿಕ, ಹಿಂಸಾಚಾರದ ಕುರಿತು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠವು ವಿಚಾರಣೆ ನಡೆಸುತ್ತಿದೆ.

ಕೇಂದ್ರ ಮತ್ತು ಮಣಿಪುರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡ ಬಳಿಕ ಕೇಂದ್ರ ಸರ್ಕಾರವು, ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್‌ಗಳನ್ನು ಸಿಬಿಐಗೆ ವರ್ಗಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X