ತುಮಕೂರು | ಪೊಲೀಸರ ಮೂರು ಪಾಳಿ ಕೆಲಸದ ಬಗ್ಗೆ ಸಾಧಕ-ಬಾಧಕ ಪರಿಶೀಲಿಸಿ ನಿರ್ಧಾರ : ಡಾ.ಜಿ. ಪರಮೇಶ್ವರ

Date:

Advertisements

ಪೊಲೀಸ್ ಇಲಾಖೆಯಲ್ಲಿ ಮೂರು ಪಾಳಿಯಲ್ಲಿ ಕೆಲಸ ಮಾಡಿಸುವ ಬಗ್ಗೆ ಇನ್ನು ಮಾತುಕತೆ ನಡೆಸಲಾಗುತ್ತಿದೆ. ಎಲ್ಲ ಸಾಧಕ-ಬಾಧಕಗಳನ್ನು ಪರಿಶೀಲನೆ ಮಾಡಿ ನಂತರ ಆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು

ತುಮಕೂರು ನಗರದಲ್ಲಿ ನವೀಕರಣಗೊಂಡಿರುವ ಜಿಲ್ಲಾ ಮತ್ಸಾಲಯವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಪಾಳಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸ್ಥಿತಿಗತಿಯೂ ನೋಡಬೇಕಲ್ಲವೆ, ದಿಢೀರನೆ ಕ್ರಮ ಕೈಗೊಳ್ಳಲು ಆಗುವುದಿಲ್ಲ ಎಂದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಏನಾದರೂ ಅನುದಾನ ಕೊರತೆಗಳಿದ್ದರೆ ಆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸ್ವಾಭಾವಿಕವಾಗಿ ರಾಜಕೀಯವಾಗಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತವೆ. ಇದು ಎಲ್ಲ ಪಕ್ಷಗಳಲ್ಲೂ ಸರ್ವೇ ಸಾಮಾನ್ಯ ಎಂದರು.

Advertisements

ಸುರ್ಜೇವಾಲಾ ಅವರು ಶಾಸಕರೊಂದಿಗೆ ಸಭೆ ನಡೆಸುತ್ತಿರುವುದು ಕ್ಷೇತ್ರಗಳ ಅಭಿವೃದ್ಧಿ ವಿಚಾರದ ಕುರಿತು ಮಾಹಿತಿ ಪಡೆದುಕೊಳ್ಳಲು ಅಷ್ಟೇ ಎಂದರು.  

ಸಿಗಂಧೂರು ಸೇತುವೆ ಉದ್ಘಾಟನೆಗೆ ಯಾರ ವಿರೋಧವೂ ಇಲ್ಲ. ಇದು ಕೇಂದ್ರ ಸರ್ಕಾರದ ಯೋಜನೆಯಾಗಿರುವುದರಿಂದ ಅವರೇ ಬಂದು ಉದ್ಘಾಟನೆ ಮಾಡಲು ಮುಂದಾಗಿದ್ದಾರೆ. ಈ ಉದ್ಘಾಟನೆಯನ್ನು ಮುಂದಕ್ಕೆ ಹಾಕಿ ಎಂದಷ್ಟೇ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ ಎಂದು ಅವರು ಈ ಸೇತುವೆ ಉದ್ಘಾಟನೆ ಸಂಬಂಧ ರಾಜ್ಯ ಸರ್ಕಾರದ ವಿರೋಧದ ಬಗ್ಗೆ ಸಮರ್ಥಿಸಿಕೊಂಡರು. 

ಸಾಮಾನ್ಯವಾಗಿ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ರಾಜ್ಯ ಸರ್ಕಾರದ್ದು ಪಾಲು ಇರುತ್ತದೆ. ಕೇಂದ್ರ ಒಂದೇ ಮಾಡಲು ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಒಟ್ಟಿಗೆ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು. 

ಒಂದೊಂದು ಬಾರಿ ಮುಖ್ಯಮಂತ್ರಿಗಳು ಉದ್ಘಾಟನಾ ಕಾರ್ಯಕ್ರಮಗಳಿಗೆ ಹೋಗಲು ಸಾಧ್ಯವಾಗದಿದ್ದಾಗ ನಮ್ಮಲ್ಲೇ ಇರುವ ಒಬ್ಬರು ಸಚಿವರೊಬ್ಬರನ್ನು ನಿಯೋಜಿಸುತ್ತಾರೆ. ಇದು ರಾಜ್ಯ ಸರ್ಕಾರದ ಪದ್ದತಿ. ಆದರೆ ಎಲ್ಲೋ ಒಂದು ಕಡೆ ಈ ವಿಚಾರದಲ್ಲಿ ಕಮ್ಯುನಿಕೇಷನ್ ಗ್ಯಾಪ್ ಆಗಿರಬಹುದು. ಅದನ್ನು ಸರಿಪಡಿಸಿಕೊಂಡರಾಯಿತು ಎಂದರು.

ಆಪರೇಷನ್ ಬಿಜೆಪಿ ಆಗುತ್ತದೆ. 53 ಜನ ಶಾಸಕರ ಪಟ್ಟಿ ಸಿದ್ದವಾಗಿದೆ. ಪಕ್ಷಕ್ಕೆ ಬರದಿದ್ದರೆ ಐ.ಡಿ., ಇಡಿ ರೇಡ್ ಆಗುತ್ತದೆ ಎಂದು ಕಾಶಂಪ್ಪನವರು ಹೇಳಿಕೆ ನೀಡಿದ್ದಾರೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಕಾಶಂಪ್ಪನವರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ, ಆ ಬಗ್ಗೆ ಅವರನ್ನೇ ಕೇಳಬೇಕು ಎಂದರು.

ತುಮಕೂರು ಸ್ಟೇಡಿಯಂ ನಿರ್ವಹಣೆಗೆ ಒಂದು ಸ್ಕೀಂನ ಅಳವಡಿಸಿಕೊಳ್ಳುವ ಸಂಬಂಧ ಚಿಂತನೆ ನಡೆಸಲಾಗುತ್ತಿದೆ. ನಿರ್ವಹಣೆಗೆ ಇಲಾಖೆಯಿಂದ ಹಣ ಕೊಡುತ್ತಿಲ್ಲ ಎಂಬ ಕೂಗು ಕೇಳಿ ಬರುತ್ತಿತ್ತು. ಹಾಗಾಗಿ ಬೆಂಗಳೂರಿನ ಸ್ಟೇಡಿಯಂ ನಿರ್ವಹಣೆಗೆ ಅನುಸರಿಸುತ್ತಿರುವ ಮಾರ್ಗವನ್ನೇ ಇಲ್ಲು ಅನುಸರಿಸೋಣ ಎಂಬ ಚಿಂತನೆ ಇದೆ ಎಂದರು. 

ತುಮಕೂರನ್ನು ವ್ಯವಸ್ಥಿತವಾಗಿ ವಿಸ್ತರಣೆ ಮಾಡಲು 14 ಪಂಚಾಯ್ತಿಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಚಿಂತನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X