ಕೇಂದ್ರದಿಂದ ಮಂಗಳೂರಿಗೆ 100 ಎಲೆಕ್ಟ್ರಿಕ್ ಬಸ್‌: ಸಂಸದ ಕ್ಯಾ.ಬ್ರಿಜೇಶ್ ಚೌಟ

Date:

Advertisements

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಭಾನುವಾರ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಕಂಬಳಪದವುನಲ್ಲಿ ನಿರ್ಮಾಣಗೊಂಡ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

“ದೇಶದಲ್ಲಿ ವಾಹನಗಳಿಂದ ಆಗುತ್ತಿರುವ ವಾಯುಮಾಲಿನ್ಯ ತಡೆಗಟ್ಟುವುದಕ್ಕೆ ಕೇಂದ್ರ ಸರ್ಕಾರವು ದೇಶದೆಲ್ಲೆಡೆ ಎಲೆಕ್ಟ್ರಿಕ್ ಬಸ್‌ಗಳ ಬಳಕೆಯನ್ನು ಹೆಚ್ಚು ಜನಪ್ರಿಯಗೊಳಿಸುತ್ತಿದೆ. ಅದರಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ಕರ್ನಾಟಕಕ್ಕೆ ಒಟ್ಟು 750 ಎಲೆಕ್ಟ್ರಿಕಲ್ ಬಸ್‌ಗಳು ಮಂಜೂರಾಗಿದ್ದು, ಆ ಪೈಕಿ ಮಂಗಳೂರಿಗೆ 100 ಬಸ್‌ಗಳನ್ನು ಮಂಜೂರುಗೊಳಿಸಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮೈಸೂರು, ಶಿವಮೊಗ್ಗ ಸೇರಿದಂತೆ ಒಟ್ಟು 10 ಜಿಲ್ಲೆಗಳಿಗೆ ತಲಾ 100 ಎಲೆಕ್ಟ್ರಿಕಲ್ ಬಸ್‌ಗಳನ್ನು ಮಂಜೂರು ಮಾಡಲಾಗಿದೆ. ಪರಿಸರ ಸ್ನೇಹಿಯಾದ ಈ ಬಸ್‌ಗಳು ಶೀಘ್ರದಲ್ಲೇ ಮಂಗಳೂರು ನಗರದ ವಿವಿಧ ರೂಟ್‌ಗಳಲ್ಲಿ ಸಂಚರಿಸಲಿವೆ” ಎಂದರು.

Advertisements

ಇದನ್ನೂ ಓದಿ: ಮೂಡುಬಿದಿರೆ | ಇಸ್ಪೀಟ್ ಅಡ್ಡೆ ಮೇಲೆ ಖಾಕಿ ದಾಳಿ; 8 ಮಂದಿ ವಶಕ್ಕೆ

“ಕೆಎಸ್‌ಆರ್‌ಟಿಸಿ ಕೂಡಲೇ ಈ 100 ಎಲೆಕ್ಟ್ರಿಕಲ್ ಬಸ್‌ಗಳ ನಿರ್ವಹಣೆಗೆ ಮಂಗಳೂರಿನಲ್ಲಿ ಸೂಕ್ತ ಜಾಗವನ್ನು ಗುರುತಿಸಬೇಕಿದೆ. ಇತ್ತೀಚೆಗೆ ನಡೆದಿರುವ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿಯೂ ಈ ಬಗ್ಗೆ ಪ್ರಸ್ತಾಪಿಸಿದ್ದು, ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್‌ಗಳ ನಿರ್ವಹಣೆಗೆ ಜಾಗ ಸೇರಿದಂತೆ ಸೂಕ್ತ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೂ ಸೂಚಿಸಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು | ಅನುಮತಿ ಪಡೆಯದೆ ಡಿಜೆ ಬಳಕೆ; FIR ದಾಖಲು

“ರಾಜ್ಯ ಸಾರಿಗೆ ಇಲಾಖೆಯು ಈ ನಿಟ್ಟಿನಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಅಗತ್ಯ ಮೂಲಸೌಕರ್ಯ ಒದಗಿಸುವಲ್ಲಿ ಸೂಕ್ತ ಕ್ರಮ ಜರುಗಿಸಬೇಕು” ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ, ಸಚಿವ ರಾಮಲಿಂಗಾ ರೆಡ್ಡಿ ಅವರಿಗೂ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X