ಪುತ್ತೂರು-ಮಂಗಳೂರು ನಡುವೆ ಹೊಸದಾಗಿ ತಡೆರಹಿತ ಸರ್ಕಾರಿ ಬಸ್ ಓಡಾಡಕ್ಕೆ ಪುತ್ತೂರು ಬಸ್ ನಿಲ್ದಾಣದಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರು ಬಸ್ ನಿಲ್ದಾಣದಲ್ಲಿ ತಡೆರಹಿತ ಬಸ್ಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೂ ಗುಚ್ಛ ನೀಡುವ ಮೂಲಕ ಶುಭ ಹಾರೈಸಿದರು.
ಇದನ್ನೂ ಓದಿ: ಮಂಗಳೂರು | ಶಕ್ತಿ ಯೋಜನೆ ರಾಜ್ಯ ಸರ್ಕಾರದ ಹೊಸ ಮೈಲಿಗಲ್ಲು: ಐವನ್ ಡಿಸೋಜಾ
“ಪುತ್ತೂರು-ಮಂಗಳೂರು ನಡುವೆ ತಡೆರಹಿತವಾಗಿ ಪ್ರತಿದಿನ 7 ಬಸ್ಸುಗಳು 29 ಟ್ರಿಪ್ಗಳ ಸಂಚಾರ ನಡೆಸಲಿವೆ. ಪುತ್ತೂರು ಮಂಗಳೂರು ನಡುವೆ ಎಲ್ಲಿಯೂ ನಿಲ್ಲದೆ ನೇರ ಸಂಚರಿಸಲಿದ್ದು, ಅತಿ ಕಡಿಮೆ ಅವಧಿಯಲ್ಲಿ ತಲುಪಲಿದೆ. ಈ ಬಸ್ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಪ್ರಯಾಣವಾಗಿದ್ದು, ಎಲ್ಲ ರೀತಿಯ ಪಾಸುಗಳು ಅನ್ವಯವಾಗುತ್ತವೆ” ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೇರಿದಂತೆ ಇತರರು ಇದ್ದರು.
