ಶಿವಮೊಗ್ಗ | ಫೋನ್‌ ಪೇ ಮೂಲಕ ಸೈಬರ್ ವಂಚನೆ

Date:

Advertisements

ಶಿವಮೊಗ್ಗ ಜಿಲ್ಲೆಯಲ್ಲಿ ಮೊಬೈಲ್‌ ನಂಬರನ್ನೇ ಹ್ಯಾಕ್‌ ಮಾಡಿ ಗೂಗಲ್‌ ಪೇ, ಫೋನ್‌ ಪೇ ಮೂಲಕ ಸಾವಿರಾರು ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ.

ಶಿವಮೊಗ್ಗದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ಈ ಸಂಬಂಧ ಜಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಶಿವಮೊಗ್ಗದ ವ್ಯಕ್ತಿ ಕಳೆದ ತಿಂಗಳು ವಿದ್ಯುತ್‌ ಬಿಲ್‌ ₹754‌ ಅನ್ನು ಫೋನ್‌ ಪೇ ಮೂಲಕ ಪಾವತಿಸಿದ್ದರು, ಅವರ ಬ್ಯಾಂಕ್‌ ಖಾತೆಯಲ್ಲಿ ₹94,624 ಬ್ಯಾಲೆನ್ಸ್‌ ಇರುವುದಾಗಿ ತಿಳಿಸಲಾಗಿತ್ತು. ಬೇರೊಂದು ಕಡೆ ಫೋನ್‌ ಪೇ ಸ್ಕ್ಯಾನರ್‌ ಬಳಸುವಾಗ ಅದು ಸರಿಯಾಗಿ ಕೆಲಸ ಮಾಡಲಿಲ್ಲ. ಕೆಲವು ದಿನ ಮೊಬೈಲ್‌ ನೆಟ್‌ವರ್ಕ್‌ ಕೂಡ ಸಮಸ್ಯೆಯಾಗಿತ್ತು. ಹಾಗಾಗಿ ಫೋನ್‌ ಪೇ ಕೂಡ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ.‌

Advertisements

ಹಣ ಬಿಡಿಸಿಕೊಳ್ಳಲು ಶಿವಮೊಗ್ಗದ ವ್ಯಕ್ತಿ ಬ್ಯಾಂಕ್‌ಗೆ ತೆರಳಿದ್ದರು. ಆಗ ಅವರ ಬ್ಯಾಂಕ್‌ ಖಾತೆಯಲ್ಲಿ ಕೇವಲ ₹4,025 ಇತ್ತು. ವಿಚಲಿತರಾದ ವ್ಯಕ್ತಿ ಬ್ಯಾಂಕ್‌ ಖಾತೆಯ ಸ್ಟೇಟ್‌ಮೆಂಟ್‌ ತೆಗೆಸಿದ್ದಾರೆ. ಆಗ ಅವರ ಖಾತೆಯಿಂದ ಹಲವು ಭಾರಿ ಯುಪಿಐ ಮೂಲಕ ಒಟ್ಟು ₹90,599 ವರ್ಗಾವಣೆ ಆಗಿರುವುದು ಗೊತ್ತಾಗಿದೆ.

ಇದನ್ನು ಓದಿದ್ದೀರಾ? ಬೀದರ್‌ | ಪ್ರೀತಿಸುವಂತೆ ಯುವಕನಿಂದ ಕಿರುಕುಳ : ಅಪ್ರಾಪ್ತೆ ನೇಣಿಗೆ ಶರಣು

ಮೊಬೈಲ್‌ ನಂಬರ್‌ ಹ್ಯಾಕ್‌ ಮಾಡಿ, ಯುಪಿಐ ಮೂಲಕ ಹಣ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ಶಿವಮೊಗ್ಗದ ವ್ಯಕ್ತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ಜಯನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X